ಟ್ರ್ಯಾಕ್ಟರ್ ಪಲ್ಟಿ : ಸ್ಥಳದಲ್ಲೇ ರೈತಸಾವು

ಕುಣಿಗಲ್ :

     ರೈತನೋರ್ವನ್ನು ಟ್ರ್ಯಾಕ್ಟರ್ ನಲ್ಲಿ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಹುತ್ರಿದುರ್ಗ ಹೋಬಳಿ ನಾಗನಹಳ್ಳಿ ಗ್ರಾಮದಲ್ಲಿ ಸೋಮವಾರ ಸಂಬವಿಸಿದೆ ನಾಗನಹಳ್ಳಿ ಗ್ರಾಮದ ರಾಮಕೃಷ್ಣ( 63) ಮೃತ ರೈತ,ರಾಮಕೃಷ್ಣ ಅವರು ಟ್ರ್ಯಾಕ್ಟರ್ ಚಾಲನೆ ಮಾಡುತ್ತಾ ಜಮೀನು ಉಳುಮೆ ಮಾಡುತ್ತಿದ್ದರು ಆದರೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆಯಿತ್ತು ಟ್ರ್ಯಾಕ್ಟರ್ ಕೆಳಗೆ ರಾಮಕೃಷ್ಣ ಸಿಕ್ಕಿ ಹಾಕಿಕೊಂಡು ಸ್ಥಳದಲ್ಲೇ‌ ಮೃತಪಟ್ಟಿದ್ದಾರೆ, ಸ್ಥಳಕ್ಕೆ ಕುಣಿಗಲ್ ಪೊಲೀಸ್ ಠಾಣೆಯ ವೃತ್ತ ನಿರೀಕ್ಷರ ಎಸ್ .ಬಿ ನವೀನ್ ಗೌಡ ಬೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ

Recent Articles

spot_img

Related Stories

Share via
Copy link