ಲಖನೌ:
ಬೆಳ್ಳಂ ಬೆಳ್ಳಗ್ಗೆ ಘೋರ ದುರಂತವೊಂದು ಉತ್ತರಪ್ರದೇಶದಲ್ಲಿ ನಡೆದಿದೆ. ಮಿರ್ಜಾಪುರದಲ್ಲಿ ರೈಲ್ವೆ ಹಳಿಗಳನ್ನು ದಾಟುತ್ತಿದ್ದ ಪ್ರಯಾಣಿಕರ ಮೇಲೆ ರೈಲೊಂದು ಹರಿದಿದ್ದು, ಹಲವರು ಸಾವನ್ನಪ್ಪಿದ್ದಾರೆ. ಯಾತ್ರಿಕರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಚೋಪನ್ನಿಂದ ವಾರಣಾಸಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ಎದುರಾಗಿದೆ.








