ಮಧುಗಿರಿ
ವಿದ್ಯುತ್ ಅವಘಡದಿಂದಾಗಿ ಫಸಲಿಗೆ ಬಂದಿದ್ದ ಅಡಕೆ ಹಾಗೂ ತೆಂಗಿನ ಮರಗಳು ಸುಟ್ಟು ಕರಕಲಾಗಿ ಹೋಗಿರುವ ಘಟನೆ ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಬಿಟ್ಟನಕುರಿಕೆ ಗ್ರಾಮದಲ್ಲಿ ಸಂಭವಿಸಿದೆ.
ಎಸ್.ಹನುಮಂತರಾಯಪ್ಪ ಎಂಬುವವರಿಗೆ ಸೇರಿರುವ ಮದ್ಲೆರ್ಲರಹಳ್ಳಿ ಸರ್ವೆ ನಂ. 28/4 ರಲ್ಲಿ ಸುಮಾರು 4 ಎಕರೆ ವಿಸ್ತೀರ್ಣದ ಜಮೀನಿನಲ್ಲಿ ಬೆಳೆದಿದ್ದ 350 ತೆಂಗು ಹಾಗೂ 150 ಅಡಕೆ ಮರಗಳು ಶೇ.90 ರಷ್ಟು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ಬಂದು ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
