ತುಮಕೂರು : ನೂತನ ಎಸ್ಪಿ ಅಧಿಕಾರ ಸ್ವೀಕಾರ

 ತುಮಕೂರು :

     ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ 2012 ಬ್ಯಾಚ್‍ನ ಐಪಿಎಸ್ ಅಧಿಕಾರಿ ರಾಹುಲ್‍ಕುಮಾರ್ ಶಹಾಪುರವಾದ್ ಗುರುವಾರ ಮಧ್ಯಾಹ್ನ 1ಕ್ಕೆ ಅಧಿಕಾರಸ್ವೀಕರಿಸಿದರು.

      ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವರ್ಗಾವಣೆಗೊಂಡಿರುವ ನಿರ್ಗಮಿತ ಎಸ್ಪಿ ಡಾ.ಕೋನಂ ವಂಸಿಕೃಷ್ಣ ಅವರು ನೂತನ ಎಸ್ಪಿಗೆ ಹೂಗುಚ್ಚ ನೀಡಿ ಶುಭಕೋರಿದರು. ಈ ವೇಳೆ ಎಎಸ್ಪಿ ಉದೇಶ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದರು. ಬಳಿಕ ಡಿವೈಎಸ್ಪಿಗಳೊಂದಿಗೆ ಸಭೆ ನಡೆಸಿದ ನೂತನ ಪೊಲೀಸ್ ವರಿಷ್ಠಾಧಿಕಾರಿಗಳು, ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದಲ್ಲದೆ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಅವರನ್ನು ಭೇಟಿಯಾಗಿ ಜಿಲ್ಲೆಯಕಾನೂನು ಸುವ್ಯವಸ್ಥೆ ಕುರಿತು ಸಮಾಲೋಚನೆ ನಡೆಸಿದ್ದಾರೆ.

ನಿರ್ಗಮಿತ ಎಸ್ಪಿ ಡಾ.ವಂಸಿಕೃಷ್ಣ ಅವರು ಗುರುವಾರ ನೂತನ ಎಸ್ಪಿ ರಾಹುಲ್‍ಕುಮಾರ್ ಶಹಪುರ್‍ವಾದ್ ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭಕೋರಿದರು.

     ತುಮಕೂರು ಜಿಲ್ಲೆ ಧಾರ್ಮಿಕ, ಸಾಂಸ್ಕøತಿಕ, ಶಾಂತಿ ಪ್ರಿಯ ಜನರನ್ನು ಹೊಂದಿರುವ ಸುಂದರ ಜಿಲ್ಲೆ. ಇಂತಹ ಜಿಲ್ಲೆಯ ಎಸ್ಪಿಯಾಗಿ ಕಾರ್ಯನಿರ್ವಹಣೆ ಅವಕಾಶ ದೊರೆತಿರುವುದು ಸಂತಸ ತಂದಿದೆ .ಕಾನೂನು ಸುವ್ಯವಸ್ಥೆ ಸೇರಿ ಪ್ರಸಕ್ತ ಕೋವಿಡ್ ನಿರ್ಬಂಧಗಳ ಪಾಲನೆಗೆ ಒತ್ತುಕೊಡಲಾಗುವುದು. ಜನರ ಸಹಕಾರ ಮುಖ್ಯ.

-ರಾಹುಲ್‍ಕುಮಾರ್ ಶಹಾಪುರ್‍ವಾದ್, ನೂತನ ಎಸ್ಪಿ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap