ತುಮಕೂರು : ಆಕಸ್ಮಿಕ ಬೆಂಕಿ ಬಿದ್ದು ಕೊಬ್ಬರಿ ಭಸ್ಮ!!

 ತುಮಕೂರು : 

     ಕೊಬ್ಬರಿ ಇದ್ದ ಶೆಡ್‍ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸಾವಿರಾರು ರೂ. ಮೌಲ್ಯದ ಕೊಬ್ಬರಿ ಸುಟ್ಟು ಕರಕಲಾಗಿರುವ ಘಟನೆ ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಹೋಬಳಿಗೆ ಸೇರಿದ ಸೋಪನಹಳ್ಳಿ ಗ್ರಾಮದಲ್ಲಿ ಜರುಗಿದೆ.

ರೈತ ಮಹಾಲಿಂಗಯ್ಯ ಎಂಬುವರಿಗೆ ಸೇರಿದ ಈ ಕೊಬ್ಬರಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದ್ದು, ಸುಮಾರು 10 ಸಾವಿರ ರೂ.ಗಳಿಗೂ ಹೆಚ್ಚು ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

      ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಶ್ರಮಿಸಿತಾದರೂ ಬೆಂಕಿ ನಂದಿಸುವಷ್ಟರಲ್ಲಿ ಕೊಬ್ಬರಿ ಸಂಪೂರ್ಣ ಸುಟ್ಟು ಹೋಗಿತ್ತು ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap