ಸಿಎಂ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಮಾಧುಸ್ವಾಮಿ ಗರಂ!!

  ತುಮಕೂರು : 

      ಮೊದಲು ನಿಮ್ಮ ಜೊತೆಯಲ್ಲಿರುವವರು ಕೆಲಸ ಮಾಡಲು ಹೇಳಿ, ನಂತರ ಜಿಲ್ಲೆಗಳ ರಿವ್ಯೂ ಮಾಡಿ.., ಇದು ಸೋಮವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್‍ಯಡಿಯೂರಪ್ಪ ಅವರಿಗೆ ನೇರವಾಗಿ ಹೇಳಿದ ಮಾತು.

      ಪ್ರಧಾನಿ ಮೋದಿ ಅವರು ಮಂಗಳವಾರ ನಡೆಸಲಿರುವ ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವಿಡಿಯೋ ಕಾನ್ಫರೆನ್ಸ್‍ಗೆ ಪೂರ್ವಭಾವಿಯಾಗಿ ಸೋಮವಾರ ವಿಡಿಯೋ ಕಾನ್ಫರೆನ್ಸ್ ನಡೆಸಿದ ಮುಖ್ಯಮಂತ್ರಿಗಳು ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಾರ್ಯವೈಖರಿ ಅಸಮಾಧಾನ ವ್ಯಕ್ತಪಡಿಸಲು ಮುಂದಾದರು. ಇದೇಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಿಎಂ ಜಿಲ್ಲಾಧಿಕಾರಿಗಳ ಕಾರ್ಯವೈಖರಿ ಪ್ರಶ್ನಿಸಲು ಮುಂದಾದಾಗ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಧ್ಯಪ್ರವೇಶಿಸಿ ನೇರವಾಗಿಯೇ ಸಿಎಂ ಅವರಿಗೆ ಕಳೆದೊಂದು ತಿಂಗಳಿಂದ ಜಿಲ್ಲೆಯ ಒಂದು ಸಮಸ್ಯೆಗೂ ಪರಿಹಾರ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

     ರಾಜ್ಯದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಸಚಿವರ ಕಾರ್ಯವೈಖರಿ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಜೆಸಿಎಂ ಅವರು ತಿಂಗಳ ಹಿಂದೆಯೇ ಡಿಸಿಎಂ ಹಾಗೂ ಆರೋಗ್ಯ ಕಾರ್ಯಪಡೆ ಮುಖ್ಯಸ್ಥ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಬಳಿ ಆಕ್ಸಿಜನ್ ಫ್ಲ್ಯಾಂಟ್‍ಗೆ ಬೇಡಿಕೆ ಇಟ್ಟಿದ್ದೆ. ಇದುವರೆಗೂ ಈಡೇರಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap