ತುಮಕೂರು : 540 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ

ತುಮಕೂರು : 

      ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಯಲ್ಲಿಂದು 2021-22ನೇ ಸಾಲಿನ ಲಿಂಕ್ ಡಾಕ್ಯುಮೆಂಟ್ ಕಾರ್ಯಕ್ರಮ, 15ನೇ ಹಣಕಾಸು ಯೋಜನೆ ಸೇರಿ ವಿವಿಧ ಕಾಮಗಾರಿಗಳಿಗೆ 540 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಾಕೇಶ್ ಸಿಂಗ್ ಅನಮೋದನೆ ನೀಡಿದರು.

      ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ವಿವಿಧ ಸ್ಥಾಯಿ ಸಮಿತಿ ಮತ್ತು ಸಾಮಾನ್ಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳಡಿ ಕೈಗೊಂಡಿರುವ ವಿವಿಧ ಕಾರ್ಯಕ್ರಮಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಇಲಾಖಾವಾರು ರೂಪಿಸಿರುವ ಕಾರ್ಯಕ್ರಮಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

     ಶಾಲಾ ಮಕ್ಕಳಿಗಾಗಿ ರೂಪಿಸಿರುವ ಅಕ್ಷರ ದಾಸೋಹ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರಲ್ಲದೆ ಪರಿಶಿಷ್ಟ ಜಾತಿ/ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು. ಅಲ್ಲದೆ ಬಾಡಿಗೆ ಕಟ್ಟಡದಲ್ಲಿ ನಡೆಯುವ ಹಾಸ್ಟೆಲ್‍ಗಳ ಸ್ಥಿತಿ ಗತಿಗಳನ್ನು ಗಮನಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ವಿಶೇಷ ತರಗತಿಗಳನ್ನು ನಡೆಸಲು ಸೂಕ್ತ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

      ಜಿಲ್ಲೆಯಲ್ಲಿ ಕೃಷಿ ಇಲಾಖೆಯಡಿ ರೈತರಿಗೆ ನೀಡಲಾಗುವ ಬಿತ್ತನೆ ಬೀಜ, ರಸಗೊಬ್ಬರ, ಮಳೆ-ಬೆಳೆ ಪರಿಸ್ಥಿತಿ ಬಗ್ಗೆ ಮತ್ತು ಬೆಳೆಯಲಾಗುವ ಮಿಶ್ರ ಬೆಳೆಗಳ ಬಗ್ಗೆ ತಾಲ್ಲೂಕುವಾರು ಅಂಕಿ- ಅಂಶಗಳನ್ನು ಕ್ರೋಢೀಕರಿಸಬೇಕು ಹಾಗೂ ತೋಟಗಾರಿಕೆ ಇಲಾಖೆಯಡಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ ರೈತರಿಗೆ ಪ್ರೋತ್ಸಾಹ ಧನ, ಇತರೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದರು.

      ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಯೋಜನೆಯಡಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯ, ಹೂಳೆತ್ತುವುದು, ಕಾಲುವೆ ನಿರ್ವಹಣೆ ಸೇರಿದಂತೆ ನೀರಾವರಿಗೆ ಸಂಬಂಧಿಸಿದ ಎಲ್ಲಾ ಕಾರ್ಯಕ್ರಮ ಹಾಗೂ ಮೂಲಭೂತ ಸೌಕರ್ಯಗಳನ್ನು ಅನುಷ್ಠಾನಗೊಳಿಸುವಂತೆ ಸೂಚಿಸಿದರು.

      ಸಭೆಯಲ್ಲಿ ಲಿಂಕ್ ಡಾಕ್ಯುಮೆಂಟ್‍ನಡಿ ಲೋಕೋಪಯೋಗಿ ಇಲಾಖೆಗೆ 797.99 ಲಕ್ಷ ರೂ., ಅಕ್ಷರ ದಾಸೋಹ-8879.93 ಲಕ್ಷ ರೂ., ಸಾಮಾನ್ಯ ಶಿಕ್ಷಣ-17397.12 ಲಕ್ಷ ರೂ., ಜನಶಿಕ್ಷಣ-60.11ಲಕ್ಷ ರೂ., ಕ್ರೀಡಾ ಮತ್ತು ಯುವಜನ ಸೇವೆಗಳು-111.69 ಲಕ್ಷ ರೂ., ಕಲೆ ಮತ್ತು ಸಂಸ್ಕøತಿ-6 ಲಕ್ಷ ರೂ., ವೈದ್ಯಕೀಯ ಮತ್ತು ಜನಾರೋಗ್ಯ-5978 ಲಕ್ಷ ರೂ., ಕುಟುಂಬ ಕಲ್ಯಾಣ-3479.45 ಲಕ್ಷ ರೂ., ಆಯುμï-593.85ಲಕ್ಷ ರೂ., ಪರಿಶಿಷ್ಟ ಜಾತಿ ಕಲ್ಯಾಣ 2919.89 ಲಕ್ಷ ರೂ., ಪರಿಶಿಷ್ಟ ಪಂಗಡ ಕಲ್ಯಾಣ-1090.74 ಲಕ್ಷ ರೂ. ಹಿಂದುಳಿದ ವರ್ಗಗಳ ಕಲ್ಯಾಣ-5386.26 ಲಕ್ಷ ರೂ., ಅಲ್ಪಸಂಖ್ಯಾತರ ಕಲ್ಯಾಣ-499.83 ಲಕ್ಷ ರೂ., ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ-83.91 ಲಕ್ಷ ರೂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ- 303.72 ಲಕ್ಷ ರೂ., ಕೃಷಿ-391.5 ಲಕ್ಷ ರೂ., ಭೂಸಾರ ಮತ್ತು ಜಲ ಸಂರಕ್ಷಣೆ-133.20 ಲಕ್ಷ ರೂ., ತೋಟಗಾರಿಕೆ-799.93ಲಕ್ಷ ರೂ., ಪಶುಸಂಗೋಪನೆ-533.80 ಲಕ್ಷ ರೂ., ಮೀನುಗಾರಿಕೆ-188.82ಲಕ್ಷ ರೂ., ಅರಣ್ಯ(ಸಾಮಾಜಿಕ)-996.47 ಲಕ್ಷ ರೂ. ಸಹಕಾರ-3 ಲಕ್ಷ ರೂ., ಆರ್.ಡಿ.ಪಿ.ಆರ್. 391.17 ಲಕ್ಷ ರೂ., ಸಣ್ಣ ನೀರಾವರಿ-204.05 ಲಕ್ಷ ರೂ., ರೇμÉ್ಮ -460.1 ಲಕ್ಷ ರೂ., ಗ್ರಾಮೀಣ ಮತ್ತು ಸಣ್ಣ ಕೈಗಾರಿಕೆಗಳು-112.88ಲಕ್ಷ ರೂ., ಕೈಮಗ್ಗ ಮತ್ತು ಜವಳಿ 69.92 ಲಕ್ಷ ರೂ., ರಸ್ತೆ ಮತ್ತು ಸೇತುವೆಗಳು-731.12ಲಕ್ಷ ರೂ., ಇತರ ವಿಜ್ಞಾನ ಸಂಶೋಧನೆ-5.50 ಲಕ್ಷ ರೂ.. ಸಚಿವಾಲಯ ಆರ್ಥಿಕ ಸೇವೆಗಳು- 87.57ಲಕ್ಷ ರೂ., ಕೃಷಿ ಮಾರುಕಟ್ಟೆ-4.41ಲಕ್ಷ ರೂ., 15ನೇ ಹಣಕಾಸು ಯೋಜನೆಗಾಗಿ 663.34ಲಕ್ಷ ರೂ., ಜಿಲ್ಲಾ ಪಂಚಾಯತಿ ಅನಿಬರ್ಂಧಿತ ಅನುದಾನಕ್ಕಾಗಿ 693.56ಲಕ್ಷ ರೂ ಸೇರಿದಂತೆ ಒಟ್ಟು 54058.29 ಲಕ್ಷ ರೂ.ಗಳ ಅನುದಾನಕ್ಕೆ ಅನುಮೋದನೆ ನೀಡಲಾಯಿತು.

      ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap