ತುಮಕೂರು :
ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆ ಇದೆ. ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ 15000 ಅಧಿಕ ವಿದ್ಯಾರ್ಥಿಗಳಿದ್ದು ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು ಜಿಲ್ಲೆಯಲ್ಲಿ 74 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆಯಿಂದ ಕೆಲ ಪಠ್ಯ ವಿಷಯಗಳ ತರಗತಿಗಳು ಇನ್ನೂ ಆರಂಭವಾಗಿಲ್ಲ. ಸಹಜವಾಗಿ ವಿದ್ಯಾರ್ಥಿಗಳಲ್ಲಿ ಹಾಗೂ ಪಾಲಕರಲ್ಲಿ ಆತಂಕ ಮೂಡಿಸಿದೆ ಎಂದು ಎಬಿವಿಪಿ ಮುಖಂಡರು ಹೇಳಿದ್ದಾರೆ.
ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ಬೇಗನೆ ನೇಮಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಶಿಕ್ಷಣ ಸಚಿವರಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ನರಸಿಂಹಮೂರ್ತಿ ಅವರ ಮುಖಾಂತರ ಶಿಕ್ಷಣ ಎಬಿವಿಪಿ ಮುಖಂಡರು ಮನವಿ ಸಲ್ಲಿಸಿದರು.
ಪರೀಕ್ಷಾ ದೃಷ್ಟಿಯಿಂದ ಬೋಧನೆ ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಲಾಗಿದೆ. ಆದರೆ ಉಪನ್ಯಾಸಕರ ಕೊರತೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತರಗತಿಗಳಿಂದ ವಂಚಿತರಾಗುತ್ತಿದ್ದಾರೆ. ಜಿಲ್ಲೆಯ ಸರ್ಕಾರಿ ಪಿಯು ಕಾಲೇಜುಗಳಲ್ಲಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದಲ್ಲಿ 200ಕ್ಕಿಂತ ಹೆಚ್ಚು ಕೊರತೆ ಇದೆ. ಅದರಲ್ಲೂ ವಾಣಿಜ್ಯ ವಿಭಾಗದಲ್ಲಿ ಹೆಚ್ಚಿನ ಶಿಕ್ಷಕರ ಕೊರತೆ ಇದೆ ಎಂದು ಹೇಳಿದ್ದಾರೆ.
ಭೌತಿಕ ತರಗತಿಗಳು ಆರಂಭವಾಗಿ 8 ದಿನಗಳಾಗಿವೆ ಅವರೂ ಸರ್ಕಾರ ಇನ್ನೂ ಅತಿಥಿ ಉಪನ್ಯಾಸಕರ ನೇಮಿಸಿಲ್ಲ ವಾಣಿಜ್ಯ, ವಿಜ್ಞಾನ ವಿಭಾಗದ ಕೆಲವು ಪಠ್ಯ ವಿಷಯಗಳ ತರಗತಿಗಳು ಇನ್ನೂ ಪ್ರಾರಂಭಿಸಿಲ್ಲ. ಅತಿಥಿ ಉಪನ್ಯಾಸಕರನ್ನು ತುರ್ತಾಗಿ ನೇಮಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ಈ ವೇಳೆ ಎಬಿವಿಪಿ ನಗರ ಸಂಘಟನಾ ಕಾರ್ಯದರ್ಶಿ ಶಿವಕುಮಾರ್, ಪ್ರತಾಪ್ ಸಿಂಹ, ವಸಂತ್, ಸಂತೋಷ್, ದರ್ಶನ್ ಇತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
