ತುಮಕೂರು : ವಿವಿಧ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಸಿಇಓ

 ತುಮಕೂರು  :

      ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ ವಿವಿಧ ಯೋಜನೆಗಳಡಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪರಿಶೀಲನೆ ನಡೆಸಿದರು.

      ತುರುವೇಕೆರೆ ತಾಲ್ಲೂಕಿನ ಹಾವಾಳ ಗ್ರಾಮದಲ್ಲಿರುವ ಶಿಶು ಅಭಿವೃದ್ಧಿ ಯೋಜನೆಯಡಿ ಆಹಾರ ತಯಾರಿಸುವ ಮಹಿಳಾ ಪೂರಕ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಘಟಕದ ಪುಷ್ಟಿ ಪೌಡರ್, ಅಕ್ಕಿ, ಗೋಧಿ, ಹೆಸರುಕಾಳು ಆಹಾರ ಪದಾರ್ಥಗಳನ್ನು ಹಾಗೂ ಯಂತ್ರೋಪಕರಣಗಳನ್ನು ಪರಿವೀಕ್ಷಣೆ ಮಾಡಿದರು.

     ಬಳಿಕ ಲೋಕಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಗುಂದ ಪಾಳ್ಯ ಗ್ರಾಮದಲ್ಲಿ 2020-21ನೇ ಸಾಲಿನ ಎಸ್‍ಡಿಪಿ ಒಗ್ಗೂಡಿಸುವಿಕೆ ಯೋಜನೆಯಡಿ ಕೈಗೊಂಡಿರುವ ಅಂಗನವಾಡಿ ಕಟ್ಟಡದ ಪ್ರಗತಿಯನ್ನು ಪರಿಶೀಲಿಸಿದರು. ನಂತರ ಅದೇ ಗ್ರಾಮದ ಅಂಗನವಾಡಿ ಫಲಾನುಭವಿಗಳ ಆಹಾರ ವಿತರಣೆ, ಮಕ್ಕಳ ತೂಕದ ಬಗ್ಗೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾದ ಆಹಾರ ಪದಾರ್ಥಗಳ ಕುರಿತು ಪರಿಶೀಲನೆ ನಡೆಸಿದರು.

      ಬಳಿಕ ನೀರಗುಂದ ಗ್ರಾಮದಲ್ಲಿ ಕೈಗೊಂಡಿರುವ ಸಿಸಿ ರಸ್ತೆ ಕಾಮಗಾರಿ, ಹರಿ ದಾಸನಹಳ್ಳಿ ಗ್ರಾಮದ ಚರಂಡಿ ನಿರ್ಮಾಣ ಕಾಮಗಾರಿ ಮತ್ತು ಲೋಕಮ್ಮನಹಳ್ಳಿ ಗ್ರಾಮದ ಕಟ್ಟೆ ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿದರು. ನಂತರ ಬಾಣಸಂದ್ರ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದಿಂದ ನಿರ್ಮಿಸುತ್ತಿರುವ ಅಂಗನವಾಡಿ ಕಟ್ಟಡವನ್ನು ವೀಕ್ಷಣೆ ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap