ತುಮಕೂರು : ರೈತನ ಮೇಲೆ ಚಿರತೆ ದಾಳಿ!!

  ತುಮಕೂರು:

     ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಚಿರತೆ ಎರಗಿ ಗಾಯಗೊಳಿಸಿರುವ ಘಟನೆ ಸೆ.21 ರಂದು ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ.

     ಕಂದಿಕೆರೆ ಹೋಬಳಿ ರಾಮನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬುಕ್ಕಾಪಟ್ಟಣ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಸ.ನಂ. 43 ರಲ್ಲಿ ಸೆ.21 ರಂದು ಮಧ್ಯಾಹ್ನ ಸುಮಾರು 3.30ರ ಸಮಯದಲ್ಲಿ ಪುಟ್ಟಯ್ಯ ಎಂಬುವರು ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಅರಣ್ಯದ ಕಡೆಯಿಂದ ಏಕಾಏಕಿ ನುಗ್ಗಿದ ಚಿರತೆ ಪುಟ್ಟಯ್ಯನ ಮೇಲೆ ಎರಗಿ ಗಾಯಗೊಳಿಸಿರುತ್ತದೆ.

     ಈ ಬಗ್ಗೆ ರೈತರು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ. ಮಾಹಿತಿ ಪಡೆದ ಜಿಲ್ಲಾ ಅರಣ್ಯ ಉಪಸಂರಕ್ಷಣಾಧಿಕಾರಿ ರಮೇಶ್ ಸ್ಥಳಕ್ಕೆ ಭೇಟಿ ನೀಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap