ತುಮಕೂರು:
ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸಂಸದ ಎಸ್.ಪಿ.ಮುದ್ಧಹನುಮೇಗೌಡ ಅವರು ಇಂದು ನಾಮಪತ್ರ ಸಲ್ಲಿಕೆ ನಡೆಸಿದ್ದಾರೆ.
ಮೈತ್ರಿ ಪಕ್ಷದ ನಿರ್ಧಾರಕ್ಕೆ ಬಂಡಾಯ ಎದ್ದಿರುವ ಹಾಲಿ ಸಂಸದ ಮುದ್ದಹನುಮೇಗೌಡರು ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಕೆ ಮಾಡುವುದಾಗಿ ತಿಳಿಸಿದ್ದರು, ಅದರಂತೆ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ತಮಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡದೆ ಇರುವುದಕ್ಕೆ ಅಸಮಾಧಾನಗೊಂಡಿರುವ ಮುದ್ದಹನುಮೇಗೌಡರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದಾರೆ. ಇದರಿಂದ ಮೈತ್ರಿ ಮುಖಂಡರು ಇಕ್ಕಟ್ಟಿಗೆ ಸಿಲುಕಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ