ತುಮಕೂರು :
ಇತ್ತೀಚೆಗಷ್ಟೇ ಮದುವೆಯಾಗಿದ್ದ ಕೂಲಿ ಕಾರ್ಮಿಕ ದಂಪತಿ ಜೊತೆಯಾಗಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ವಿದ್ಯಾನಗರದಲ್ಲಿ ನಡೆದಿದೆ.
ಸಾವಿಗೀಡಾಗಿರುವ ಯುವಕನನ್ನು 25 ವರ್ಷದ ಸಾಗರ್ ಎಂದು ಗುರುತಿಸಲಾಗಿದ್ದು, ಒಟ್ಟಿಗೇ ನೇಣಿಗೆ ಕೊರಳೊಡ್ಡಿರುವ ಪತ್ನಿಯ ಹೆಸರು ಇನ್ನೂ ತಿಳಿದುಬಂದಿಲ್ಲ.ಇತ್ತೀಚೆಗಷ್ಟೇ ವಿವಾಹವಾಗಿದ್ದ ಇವರು ಪಶ್ಚಿಮಬಂಗಾಳದಿಂದ ಬಂದು ತುಮಕೂರಿನಲ್ಲಿ ನೆಲೆಸಿದ್ದರು ಎಂಬುದು ತಿಳಿದುಬಂದಿದೆ.
ಆತ್ಮಹತ್ಯೆಗೆ ಕಾರಣ ಏನು ಎಂಬುವುದು ಇನ್ನೂ ಖಚಿತವಾಗಿಲ್ಲ. ಆದರೆ ಸಾಯುವ ಮುನ್ನ ಸಂಬಂಧಿಕರೊಬ್ಬರ ಫೋನ್ ನಂಬರ್ ಬರೆದಿಟ್ಟಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/10/tumkur-suicide-casw.jpg)