ಕೊರಟಗೆರೆ :
ಚಾಲಕನ ನಿರ್ಲಕ್ಷ್ಯದಿಂದ ಖಾಸಗಿ ಶಾಲಾ ವಾಹನ ಉರುಳಿ ಎಂಟು ಶಾಲಾ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿ ಚಿಕಿತ್ಸೆ ಪಡೆದಿರುವ ಘಟನೆ ನಡೆದಿದೆ.
ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಚಿಕ್ಕನಹಳ್ಳಿ ಗ್ರಾಮದ ಎಸ್ವಿಜಿ ಪಬ್ಲಿಕ್ ಶಾಲಾ ವಾಹನದಲ್ಲಿ ಗುರುವಾರ ಬೆಳಗ್ಗೆ 9 ಗಂಟೆಯಲ್ಲಿ ಬೊಮ್ಮಲದೇವಿ (ಬಿ.ಡಿ.) ಪುರದಿಂದ ಮಕ್ಕಳನ್ನು ಕರೆತರುವಾಗ ಶಾಲಾ ವಾಹನವು ಚಾಲಕನ ನಿಯಂತ್ರಣ ತಪ್ಪಿ ನೆಲಕ್ಕೆ ಉರುಳಿದೆ. ಆಗ ಬಸ್ಸಿನಲ್ಲಿದ್ದ ಹತ್ತು ಮಕ್ಕಳ ಪೈಕಿ ಎಂಟು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿ, ಉಳಿದಿಬ್ಬರಿಗೆ ಯಾವುದೆ ಅಪಾಯವಾಗಿಲ್ಲ. ಗಾಯಗೊಂಡ ಮಕ್ಕಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಶಿಕ್ಷಕರು ಚಿಕಿತ್ಸೆ ಕೊಡಿಸಿದ್ದಾರೆ.
ಸ್ಥಳಕ್ಕೆ ಮಧುಗಿರಿ ಡಿಡಿಪಿಐ ಕೃಷ್ಣಮೂರ್ತಿ, ಬಿಇಓ ಸುಧಾಕರ್, ಅಕ್ಷರ ದಾಸೋಹ ಅಧಿಕಾರಿ ರಘು, ಸಿಆರ್ಪಿ ಸಿದ್ದರಾಜು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/10/School-van.jpg)