ತುಮಕೂರು :
ಶ್ರೀ ಸಿದ್ಧಗಂಗಾ ಮಠದ ವತಿಯಿಂದ ನಡೆಯುತ್ತಿರುವ ಶ್ರೀ ಸಿದ್ದಲಿಂಗೇಶ್ವರ ಅನಾಥಾಲಯದ ಪ್ರವೇಶ ಪತ್ರಗಳನ್ನು ಜೂನ್ 1 ರಿಂದ ನೀಡಲಾಗುವುದು ಎಂದು ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮಿಗಳು ತಿಳಿಸಿದ್ದಾರೆ.
ಇದರಲ್ಲಿ ವಿದ್ಯಾಭ್ಯಾಸ ಮಾಡಬಯಸುವ ಗ್ರಾಮೀಣ ಬಡ ಕುಟುಂಬದ ವಿದ್ಯಾರ್ಥಿಗಳು ಶ್ರೀಮಠದಲ್ಲಿ ಪ್ರವೇಶ ಪತ್ರವನ್ನು ಪಡೆಯಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಆದ್ಯತೆ ನೀಡಲಾಗುವುದು.
ಭರ್ತಿ ಮಾಡಿದ ಪ್ರವೇಶ ಪತ್ರವನ್ನು ಆಯಾ ತಾಲ್ಲೂಕಿನ ತಹಸೀಲ್ದಾರರಿಂದ ನಿಗಧಿತ ನಮೂನೆಯಲ್ಲಿ ದೃಢೀಕರಿಸಲ್ಪಟ್ಟ ವಾರ್ಷಿಕ ವರಮಾನದ ಆದಾಯ ಪ್ರಮಾಣವನ್ನು ಉಳಿದ ಸರ್ಟಿಫಿಕೇಟ್ಗಳೊಂದಿಗೆ ಜೂನ್ 30ರ ಒಳಗಾಗಿ ಅನಾಥಾಲಯದ ಕಛೇರಿಯನ್ನು ತಲುಪುವಂತೆ ಕಳುಹಿಸುವುದು. ಸರಿಯಾಗಿ ಭರ್ತಿ ಮಾಡದಿರುವ ಮತ್ತು ಸರ್ಟಿಫಿಕೇಟ್ಗಳನ್ನು ಲಗತ್ತಿಸದೆ ಬರುವ ಪ್ರವೇಶ ಪತ್ರಗಳನ್ನು ಪರಿಗಣಿಸಲಾಗುವುದಿಲ್ಲ.
ಪ್ರವೇಶ ಅಪೇಕ್ಷಿಸುವ ವಿದ್ಯಾರ್ಥಿಗಳು ಜುಲೈ 1 ರಿಂದ ಪ್ರಾರಂಭವಾಗುವ ಸಂದರ್ಶನದ ವೇಳೆಯಲ್ಲಿ ಖುದ್ದಾಗಿ ಬಂದು ಅಧ್ಯಕ್ಷರ ಸಂದರ್ಶನ ಪಡೆಯುವುದು. ಪ್ರತ್ಯೇಕವಾದ ಸಂದರ್ಶನದ ಪತ್ರಗಳನ್ನು ಕಳುಹಿಸಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಶ್ರೀಸಿದ್ಧಲಿಂಗ ಸ್ವಾಮಿಗಳು, ಅಧ್ಯಕ್ಷರು, ಶ್ರೀ ಸಿದ್ಧಗಂಗಾ ಮಠ, ಶ್ರೀ ಸಿದ್ಧಲಿಂಗೇಶ್ವರ ಅನಾಥಾಲಯ, ಶ್ರೀ ಸಿದ್ಧಗಂಗಾ ಮಠ, ತುಮಕೂರು ಇವರನ್ನಾಗಲಿ ಅಥವಾ 0816-2955059 ಇವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
