ತುಮಕೂರು : ಎಸ್ಪಿ ಕೋನ ವಂಶಿಕೃಷ್ಣ ವರ್ಗಾವಣೆ!!!

 ತುಮಕೂರು : 

     ರಾಜ್ಯ ಸರಕಾರ 12 ಐಪಿಎಸ್ ಅಧಿಕಾರಿಗಳನ್ನು ಬುಧವಾರ ವರ್ಗಾವಣೆ ಮಾಡಿ ಆದೇಶಿಸಿದ್ದು, ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಿಐಡಿ ಎಸ್ಪಿಯಾಗಿದ್ದ ರಾಹುಲ್‍ಕುಮಾರ್‍ಶಹಪುರವಾದ್ ನೇಮಕಗೊಂಡಿದ್ದಾರೆ, ಹಾಲಿ ಎಸ್ಪಿಯಾಗಿದ್ದ ಡಾ.ಕೋನಂ ವಂಶಿಕೃಷ್ಣ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.

      2012ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾದ ರಾಹುಲ್‍ಕುಮಾರ್ ಅವರು ಮಹಾರಾಷ್ಟ್ರದಲ್ಲಿ ಬಿಇ, ಎಂಬಿಎ(ಮಾರ್ಕೆಟಿಂಗ್) ಪದವಿ ಪೂರೈಸಿದವರಾಗಿದ್ದು, ಯುಪಿಎಸ್ಸಿ ಟಾಪರ್ ಆಗಿ ಹೊರಹೊಮ್ಮಿದ್ದರು. ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿ ನೇಮಕಗೊಂಡ ಇವರು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಬೆಂಗಳೂರು ಡಿಸಿಪಿ, ಸಿಐಡಿ ಎಸ್ಪಿಯಾಗಿ ಕಾರ್ಯನಿರ್ವಹಿಸಿ ದಕ್ಷ ಅಧಿಕಾರಿಯೆಂದು ಹೆಸರು ಪಡೆದಿದ್ದಾರೆ. ಇಂದು ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ.

      ನಿರ್ಗಮಿತ ಎಸ್ಪಿ ಡಾ.ಕೆ.ವಂಶಿಕೃಷ್ಣ ಜ.10 2019 ರಿಂದ ತುಮಕೂರು ಜಿಲ್ಲಾ ಎಸ್ಪಿಯಾಗಿ ಎರಡೂವರೆ ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದು, ಕೋವಿಡ್ ಮೊದಲ ಅಲೆ, ಎರಡನೇ ಅಲೆಯ ಲಾಕ್‍ಡೌನ್ ನಿಯಾಮವಣೆ ಪಾಲನೆಯ ಮಹತ್ವದ ಹೊಣೆಗಾರಿಕೆಯನ್ನು ನಿರ್ವಹಿಸಿದ್ದರು. ಸದ್ಯ ಗ್ರಾಮಾಂತರ ಜಿಲ್ಲಾ ಎಸ್ಪಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಗ್ರಾಮಾಂತರ ಎಸ್ಪಿಯಾಗಿದ್ದ ರವಿ ಡಿ ಚೆನ್ನಣ್ಣವರ್ ಅವರನ್ನು ರಾಹುಲ್‍ಕುಮಾರ್ ಅವರು ನಿರ್ವಹಿಸುತ್ತಿದ್ದ ಸಿಐಡಿ ಎಸ್ಪಿ ಸ್ಥಾನಕ್ಕೆ ನಿಯೋಜಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap