ತುರುವೇಕೆರೆ :
ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ತಾಲೂಕಿನ ಬಾಣಸಂದ್ರ ಗ್ರಾಮದ ಮೂಡಲಗಿರಿಯಪ್ಪ ಎಂಬುವರ ಜಮೀನಿನಲ್ಲಿ ಬೆಳೆದಿದ್ದ 125 ಅಡಿಕೆ ಸಸಿಗಳನ್ನು ಕತ್ತರಿಸಿ ಹಾಕಿರುವ ಅಮಾನವೀಯ ಘಟನೆ ನಡೆದಿದೆ.
ಘಟನೆಯ ಬಗ್ಗೆ ವಿವರಿಸಿದ ಮೂಡಲಗಿರಿಯಪ್ಪನವರ ಮಕ್ಕಳಾದ ಶಿವಕುಮಾರ್ ಹಾಗೂ ಮಂಜುನಾಥ್, ನಮ್ಮ ತಂದೆ ನಮ್ಮ ಚಿಕ್ಕಪ್ಪಂದಿರ ನೆರವಿನೊಂದಿಗೆ ಪಿತ್ರಾರ್ಜಿ ಆಸ್ತಿಯಲ್ಲಿ ಅಡಿಕೆ ಸಸಿಗಳನ್ನು ಬೆಳೆದಿದ್ದರು. ಕೆಲವು ಕಿಡಿಕೇಡಿಗಳು ವೈಯಕ್ತಿಕ ದ್ವೇಷದಿಂದ ಅಡಿಕೆ ಸಸಿಗಳನ್ನು ಕತ್ತರಿಸಿ ಹಾಕುವ ಮೂಲಕ ದ್ವೇಷ ಸಾಧಿಸಲು ಮುಂದಾಗಿದ್ದಾರೆಂದು ಆರೋಪಿಸಿದ್ದಾರೆ. ಇತರೆ ರೈತರುಗಳು ಅಡಿಕೆ ಸಸಿಗಳನ್ನು ಕತ್ತರಿಸಿ ಹಾಕಿರುವ ಕ್ರಮವನ್ನು ಖಂಡಿಸುತ್ತಿದ್ದಾರೆ. ಈ ಕುರಿತು ದಂಡಿನಶಿವರ ಪೋಲೀಸರಿಗೆ ದೂರು ನೀಡುವುದಾಗಿ ಮೂಡಲಗಿರಿಯಪ್ಪನವರ ಮಕ್ಕಳಾದ ಮಂಜುನಾಥ್ ಹಾಗೂ ಶಿವಕುಮಾರ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/01/17tvk02-sasi-e1610947760602.jpg)