ಕೊರೊನಾ ಹಾವಳಿಯಿಂದ ಅಭಿವೃದ್ಧಿಗೆ ಹಿನ್ನಡೆ

 ತುರುವೇಕೆರೆ :

      ಕೊರೋನಾ ವಾರಿಯರ್ಸ್‍ಗಳ ಪರಿಶ್ರಮದಿಂದ ದೇಶದಲ್ಲಿ ಕೊರೊನಾ ಗಣನೀಯವಾಗಿ ಇಳಿಕೆಯಾಗುತ್ತಿರುವುದು ಸಮಾಧಾನಕರ ಸಂಗತಿಯಾಗಿದೆ ಎಂದು ಶಾಸಕ ಮಸಾಲಾ ಜಯರಾಮ್ ತಿಳಿಸಿದರು.

      ಪಟ್ಟಣದ ಕೆ.ಹಿರಣ್ಣಯ್ಯ ಬಯಲು ರಂಗಮಂದಿರ ಆವರಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಮಾತನಾಡಿದ ಅವರು, ದೇಶ ಈ ವರ್ಷ ಕೊರೊನಾ ಸಂಕಷ್ಟಕ್ಕೆ ಸಿಲುಕಿದ್ದರಿಂದ ಪೂರ್ಣಪ್ರಮಾಣದಲ್ಲಿ ದೇಶ ಅಭಿವೃದ್ದಿಗೆ ಹಿನ್ನಡೆಯಾಗಿದೆ. ತಾಲ್ಲೂಕಿನಲ್ಲಿಯೂ 16 ಮಂದಿ ಕೊರೊನಾದಿಂದ ಮೃತಪಟ್ಟಿರುವುದು ದುಃಖದ ಸಂಗತಿ ಎಂದರು.

      ಕೊರೊನಾ ಇಳಿಮುಖಕ್ಕೆ ಕಾರಣರಾದ ತಾಲ್ಲೂಕಿನ ಕೊರೊನಾ ವಾರಿಯರ್ಸ್‍ಗಳಿಗೆ ಮೊದಲಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ ಅವರು, ಭಾರತೀಯ ಸಂಸ್ಕøತಿ, ಪರಂಪರೆ ವಿಶ್ವದ ಶ್ರೇಷ್ಠ ಪರಂಪರೆಯಾಗಿದ್ದು ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ನಮ್ಮೆಲ್ಲರಿಗೂ ನಾಡು, ನುಡಿ, ನೆಲ, ಜಲ, ಭಾಷೆಯ ವಿಚಾರದಲ್ಲಿ ಘರ್ಷಣೆ ಅಗತ್ಯವಿಲ್ಲ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೃಢನಿರ್ಧಾರದಿಂದ ಇಂದು ಕಾಶ್ಮೀರದಲ್ಲಿ ಗುಂಡಿನ ಸದ್ದು ಅಡಗಿರುವುದು ನಮ್ಮೆಲ್ಲರಿಗೂ ಸಮಾಧಾನಕರ ಸಂಗತಿಯಾಗಿದೆ. ಸರ್ವರಿಗೂ ಸಮಪಾಲು, ಸಮಬಾಳು, ಸಾಮಾಜಿಕ ನ್ಯಾಯ ದೊರಕಿಸಿಕೊಡಲು ಸಂವಿಧಾನ ಅವಕಾಶ ಕಲ್ಪಿಸಿದ್ದು ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವ ಹೊಂದಿದ ದೇಶ ನಮ್ಮದಾಗಿದೆ ಎಂದರು.

      ತಹಸೀಲ್ದಾರ್ ನಯೀಂ ಉನ್ನೀಸಾ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶಕ್ಕೆ ಸಂವಿಧಾನ ರಚಿಸಿಕೊಟ್ಟ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮ ಗಾಂಧೀಜಿಯವರ ಧ್ಯೇಯ, ಆದರ್ಶಗಳನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಸಂದೇಶ ತಿಳಿಸಿದರು.

      ಗಡಿ ಕಾಯುತ್ತ ದೇಶ ರಕ್ಷಣೆ ಮಾಡಿ ನಿವೃತ್ತಿ ಹೊಂದಿದ ವೀರ ಯೋಧ ಚಿರಂಜೀವಿ ಅವರನ್ನು ಸನ್ಮಾನಿಸಲಾಯಿತು. ಹಾಗೂ ರಾಜ್ಯ ವಲಯ ಯೋಜನೆಯಡಿ ಆಯ್ಕೆಯಾದ ತಾಲ್ಲೂಕಿನ ಎಂಟು ಫಲಾನುಭವಿಗಳಿಗೆ ಮೀನು ಹಿಡಿಯುವ ದೋಣಿ, ಹುಟ್ಟು ಇತರೆ ಸಲಕರಣೆಗಳನ್ನು ನೀಡಲಾಯಿತು.

      ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ನಾಗರತ್ನ ರವೀಂದ್ರ, ಉಪಾಧ್ಯಕ್ಷ ಭೈರಪ್ಪ, ಸದಸ್ಯೆ ಹೇಮಾವತಿ ಶಿವಾನಂದ್, ಎಪಿಎಂಸಿ ಅಧ್ಯಕ್ಷ ಮಧು, ಪ.ಪಂ ಅಧ್ಯಕ್ಷ ಅಂಜನ್ ಕುಮಾರ್, ಸದಸ್ಯರಾದ ಪ್ರಭಾಕರ್, ಚಿದಾನಂದ್, ಆಶಾ ರಾಜಶೇಖರ್, ಸ.ನೌ.ಸಂ.ಅಧ್ಯಕ್ಷ ಪರಮೇಶ್, ಇಓ ಜಯಕುಮಾರ್, ಸಿಪಿಐ ನವೀನ್, ಅಬಕಾರಿ ರವಿಶಂಕರ್, ಬಿಇಓ ಸಿ.ರಂಗಧಾಮಯ್ಯ, ಪ.ಪಂ. ಮುಖ್ಯಾಧಿಕಾರಿ ಮಂಜುಳಾದೇವಿ, ಕ್ಷೇತ್ರ ಆರೋಗ್ಯಾಧಿಕಾರಿ ಚಂದ್ರಶೇಖರ್, ಶಿಕ್ಷಕರು ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

      ತಾಲ್ಲೂಕಿನಲ್ಲಿ ಈ ವರ್ಷ ಇಬ್ಬರು ವೀರ ಯೋಧರು ನಿವೃತ್ತಿ ಹೊಂದಿ ತಾಯ್ನಾಡಿಗೆ ವಾಪಸ್ಸಾಗಿದ್ದು ಮತ್ತೊಬ್ಬರು ಗ್ರಾ.ಪಂ.ಯಲ್ಲಿ ಸ್ಪರ್ಧಿಸಿ ಗೆದ್ದಿದ್ದರೂ ಸಹಾ ಆತನನು ಗುರ್ತಿಸದಿರುವುದಕ್ಕೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಕೆಲವರಿಂದ ಆಕ್ಷೇಪಣೆ ವ್ಯಕ್ತವಾಯಿತು. ಸಾ.ಶಿ.ದೇವರಾಜ್ ಸ್ವಾಗತಿಸಿ, ಥಾಮಸ್ ನಿರೂಪಿಸಿ, ವಂದಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link