ತುರುವೇಕೆರೆ :
ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡುವಂತೆ ಅಧಿಕಾರಿಗಳಿಗೆ ಶಾಸಕ ಮಸಾಲ ಜಯರಾಮ್ ತಿಳಿಸಿದರು. ತಾಲೂಕಿನ ಮಾಯಸಂದ್ರ ಹೋಬಳಿ ಸೊರವನಹಳ್ಳಿ-ಸೀಗೆಹಳ್ಳಿ ರಸ್ತೆಯ ಮಣೆ ಚಂಡೂರು ವರೆಗೂ 200 ಲಕ್ಷ ವೆಚ್ಚದಲ್ಲಿ ಡಾಂಬರ್ ರಸ್ತೆ ನಿರ್ಮಾಣಕ್ಕೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ತಾಲೂಕಿನಲ್ಲಿ ಗ್ರಾಮೀಣ ಭಾಗದ ರಸ್ತೆಗಳಿಗೆ ಹೆಚ್ಚು ಒತ್ತು ನೀಡಿದ್ದು, ಮೂಲ ರಸ್ತೆಯಿಂದ ಗ್ರಾಮಗಳ ಸಂಪರ್ಕ ರಸ್ತೆ ಹಾಗೂ ಗ್ರಾಮದ ಒಳಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಅಭಿವೃದ್ದಿ ಕಾಣದ ಹಲವು ಮುಖ್ಯ ರಸ್ತೆಗಳಲ್ಲಿ ಅಭಿವೃದ್ದಿ ಕೈಗೊಂಡಿದ್ದು. ಕೆಲವು ದಿನಗಳಲ್ಲಿ ಪಟ್ಟಣದಿಂದ ಹೋಬಳಿಗಳಿಗೆ ತೆರಳುವ ಮುಖ್ಯ ರಸ್ತೆಗಳ ಅಭಿವೃದ್ದಿ ಕೈಗೊಳ್ಳಲು ಭೂಮಿ ಪೂಜೆ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಾಯಸಂದ್ರ ಹೋಬಳಿ ಬಿಜೆಪಿ ಅಧ್ಯಕ್ಷ ಯಶೋಧರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಕ್ಮೀದೇವಮ್ಮ, ಉಪಾಧ್ಯಕ್ಷೆ ಲಕ್ಷ್ಮಮ್ಮ, ಸದಸ್ಯರಾದ ರಮೇಶ್, ಚೇತನ್, ಉನ್ನಿಸ್, ಶ್ರೀನಿವಾಸ್, ಶ್ಯಾಮಲ, ಮುಖಂಡ ಮುರುಳಿ, ಫ್ರಭು, ಮಹಾವೀರಬಾಬು, ಸುರೇಶ್, ಸೋಮಶೇಖರ್ ಹಾಗೂ ಗ್ರಾಮಸ್ಥರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/06/28tvk01-mla-puje-scaled-e1624947661752.jpg)