ಶಿರಾ: ಸರಣಿ ಅಪಘಾತ :2 ಸಾವು….!

ತುಮಕೂರು:

    ಶಿರಾ ತಾಲೂಕಿನಲ್ಲಿ ಟಾಟಾ ಏಸ್‌ ಮತ್ತು ಕ್ಯಾಂಟರ್‌ ಹಾಗೂ ಖಾಸಗಿ ಬಸ್‌ ಮಧ್ಯೆ ಸರಣಿ ಅಪಘಾತ ಸಂಭವಿಸಿದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರಿಗೆ ಗಾಯವಾಗಿರುವ ಘಟನೆ ನಡೆದಿದೆ.
     ಚಿಕ್ಕನಹಳ್ಳಿ ಬಳಿ ಶನಿವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಟಾಟಾ ಏಸ್‌ನಲ್ಲಿದ್ದ ಇಬ್ಬರು ದುರ್ಮರಣ ಹೊಂದಿದ್ದಾರೆ.ಮೃತರನ್ನು ಕಲಬುರಗಿ ಜಿಲ್ಲೆಯ ಅರಳಗುಡಿ ಗ್ರಾಮದ ಭೀಮಾಬಾಯಿ (70) ಹಾಗೂ ಮಹಾಂತಪ್ಪ (50) ಎಂದು ಗುರುತಿಸಲಾಗಿದೆ. ಮೃತರು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು ಎಂದು ಹೇಳಲಾಗುತ್ತಿದೆ.

   ಚಿಕ್ಕನಹಳ್ಳಿ ಬಳಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ವಾಹನ ದಟ್ಟಣೆ ಉಂಟಾಗಿದ್ದು, ಈ ವೇಳೆ ಮುಂದೆ ಹೋಗುತ್ತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದಿದೆ. ನಂತರ ಹಿಂಬಂದಿಯಿಂದ ಟಾಟಾ ಏಸ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap