ಬೆಂಗಳೂರು:
ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ರನ್ನು ಭೇಟಿ ಮಾಡಿದ ಸ್ಪೀಕರ್ ಯುಟಿ ಖಾದರ್ ಮತ್ತು ಉಪಸಭಾಪತಿ ರುದ್ರಪ್ಪ ಲಮಾಣಿ ಅವರು ಬಿಜೆಪಿ ಸದಸ್ಯರನ್ನು ಅಮಾನತುಗೊಳಿಸಲು ಕಾರಣವಾದ ಸಂದರ್ಭಗಳ ಬಗ್ಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ಸದನದಲ್ಲಿ ಬಿಲ್ಗಳು ಮತ್ತು ಅಜೆಂಡಾ ದಾಖಲೆಗಳ ಪ್ರತಿಗಳನ್ನು ಹರಿದು ಅಧ್ಯಕ್ಷರ ಕಡೆಗೆ ಎಸೆದ ನಂತರ ಅವರ “ಅಸಭ್ಯ ಮತ್ತು ಅಗೌರವದ ನಡವಳಿಕೆ”ಗಾಗಿ ಅವರನ್ನು ಅಮಾನತುಗೊಳಿಸಲಾಯಿತು. ನಾಲ್ಕು ಮಾಜಿ ಸಚಿವರಾದ ಆರ್ ಅಶೋಕ, ಡಾ ಸಿ ಎನ್ ಅಶ್ವಥ್ ನಾರಾಯಣ, ವಿ ಸುನೀಲ್ ಕುಮಾರ್ ಮತ್ತು ಆರಗ ಜ್ಞಾನೇಂದ್ರ ಸೇರಿದಂತೆ 10 ಶಾಸಕರನ್ನು ಅಮಾನತುಗೊಳಿಸುವ ನಿರ್ಣಯವನ್ನು ವಿಧಾನಸಭೆ ಬುಧವಾರ ಅಂಗೀಕರಿಸಿದೆ. ಇನ್ನು ಸದಸ್ಯರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ಗುರುವಾರ ಕಲಾಪವನ್ನು ಬಹಿಷ್ಕರಿಸಿವೆ.
ಇಂದು ಬೆಳಗ್ಗೆ ಕಲಾಪ ಆರಂಭವಾದಾಗ ಪ್ರತಿಪಕ್ಷದಿಂದ ಜಿ ಜನಾರ್ಧನ ರೆಡ್ಡಿ (ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್ಪಿಪಿ) ಮಾತ್ರ ಸದನದಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/07/tgk.jpg)