ಬಾಬ್ರಿ ಮಸೀದಿ ಕುರಿತ ಹೇಳಿಕೆಗೆ ಉದ್ದವ್‌ ಠಾಕ್ರೆ ಕೆಂಡಾಮಂಡಲ….!

ಮುಂಬೈ: 

    ದೇಶದಲ್ಲಿ ನಡೆದ ಬಾಬರಿ ಮಸೀದಿ ಧ್ವಂಸದಲ್ಲಿ ಪ್ರಕರಣದಲ್ಲಿ ಒಬ್ಬನೇ ಒಬ್ಬ ಶಿವಸೇನೆ ಕಾರ್ಯಕರ್ತನೂ ಭಾಗಿಯಾಗಿಲ್ಲ ಎಂಬ ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶಿವಸೇನಾ  ನಾಯಕ ಉದ್ಧವ್ ಠಾಕ್ರೆ ಅವರು ತಮ್ಮ ಸಂಪುಟದ ಸಚಿವರ ಈ ಹೇಳಿಕೆಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು ಇಲ್ಲವೇ ಪಾಟೀಲ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಮಸೀದಿಯನ್ನು ಉರುಳಿಸುವಾಗ ಇಲಿಗಳು ತಮ್ಮ ಬಿಲಗಳಲ್ಲಿ ಅಡಗಿಕೊಂಡಿದ್ದವು ಎಂದು ಹೇಳುವ ಮೂಲಕ ಠಾಕ್ರೆ ಬಿಜೆಪಿಗೆ ಟಾಂಗ್ ನೀಡಿದೆ. ತಮ್ಮ ಪಕ್ಷದ ಹಿಂದುತ್ವವೇ ರಾಷ್ಟ್ರೀಯತೆ ಎಂದು ಭಾವಿಸುತ್ತದೆ. ಆದರೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಅದರ ಹಿಂದುತ್ವ ಏನು ಎಂಬುದನ್ನು ವಿವರಿಸಬೇಕು ಎಂದು ಮಾಜಿ ಸಿಎಂ ಹೇಳಿದ್ದಾರೆ.

ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವುತ್ ಕೂಡ ಟ್ವೀಟ್‌ ಮಾಡಿದ್ದು, ಶಿಂಧೆ ಪಾಟೀಲ್ ಅವರ ಹೇಳಿಕೆಯನ್ನು ಒಪ್ಪಿಕೊಳ್ಳುತ್ತೀರಾ, ಅದನ್ನು ಒಪ್ಪಿಕೊಂಡರೇ ಸಿಎಂ ರಾಜೀನಾಮೆ ನೀಡಬೇಕು ಎಂದು ಕೇಳಿದ್ದಾರೆ. ಇನ್ನು ಪಾಟೀಲ್ ಹೇಳಿಕೆಗೆ ಯಾವ ಯಾವ ಸಚಿವರು ರಾಜೀನಾಮೆ ನೀಡುತ್ತಾರೆ?. ‘ಶಿವಸೇನೆ ಸಂಸ್ಥಾಪಕ ಬಾಳ್ ಠಾಕ್ರೆ ಅವರ ಅನುಯಾಯಿಗಳು ಎಂದು ಹೇಳಿಕೊಳ್ಳುವ 40 ಶಿವಸೇನೆ ಶಾಸಕರು (ಸಿಎಂ ಶಿಂಧೆ ನೇತೃತ್ವದ ಪಕ್ಷದ) ಈಗ ಏನು ಮಾಡುತ್ತಾರೆ?” ಎಂದು ಕೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap