ಕುಡಿದ ಮತ್ತಿನಲ್ಲಿ ಕಿರಿಕ್‌ : ಕಿರುತೆರೆ ನಟನ ಬಂಧನ

ಬೆಂಗಳೂರು: 

    ಕಿರುತೆರೆ ನಟನೊಬ್ಬ ಬಾರ್​​ನಲ್ಲಿ ಕಂಠಪೂರ್ತಿ ಕುಡಿದು ಅಮಲೇರಿಸಿಕೊಂಡು ಕಿರಿಕ್​ ಮಾಡಿದ್ದಾರೆ. ಇವರ ವಿರುದ್ಧ ಈಗ ಬೆಂಗಳೂರಿನ ಆರ್​ಆರ್​ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪ್ರಜ್ವಲ್ ಎಂಬ ನಟನ ವಿರುದ್ಧ ದೂರು ದಾಖಲಾಗಿದೆ. ಈ ಹಿಂದೆ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅಮೃತ ವರ್ಷಿಣಿಯಲ್ಲಿ ಅಭಿನಯಿಸಿದ್ದರು. ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಅಣ್ಣ-ತಂಗಿ ಧಾರಾವಾಹಿಯಲ್ಲಿ ಇವರು ಇಂದ್ರನ ಪಾತ್ರ ನಿರ್ವಹಿಸುತ್ತಿದ್ದಾರೆ.

    ಆರ್​ಆರ್ ನಗರದ ‘ಅಮೃತ ಬಾರ್ ಆ್ಯಂಡ್ ರೆಸ್ಟೋರೆಂಟ್’ನಲ್ಲಿ ಈ ಗಲಾಟೆ ನಡೆದಿದೆ. ಪ್ರಜ್ವಲ್ ತಮ್ಮ ಸ್ನೇಹಿತರ ಜೊತೆ ಅಮೃತ ಬಾರ್​ಗೆ ಹೋಗಿದ್ದರು. ಇದೇ ಬಾರ್​ಗೆ ಚೇತನ್ ಕೂಡ ತನ್ನ ಸ್ನೇಹಿತರ ಜೊತೆ ಬಂದಿದ್ದರು. ಈ ವೇಳೆ ಪ್ರಜ್ವಲ್​ನ ಸ್ನೇಹಿತ ಮನು ಎಂಬುವವರನ್ನು ಚೇತನ್ ಕರೆದಿದ್ದಾರೆ. ಇದರಿಂದ ಅಲ್ಲಿಯೇ ಇದ್ದ ಪ್ರಜ್ವಲ್ ಅವರು ಚೇತನ್ ಮೇಲೆ ಹಲ್ಲೆ ಮಾಡಿದ್ದಾರೆ. ಚೇತನ್  ನೀಡಿದ ದೂರನ್ನು ಆಧರಿಸಿ, ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

 

    ಸದ್ಯ ಚೇತನ್ ಕೊಟ್ಟು ದೂರಿನನ್ವಯ ಎಫ್​ಐಆರ್​ ದಾಖಲು ಮಾಡಿಕೊಂಡು ಪೊಲೀಸರು‌‌ ನೊಟೀಸ್ ನೀಡಿದ್ದಾರೆ. ಇದರ ಜೊತೆಗೆ ಬಾರ್​​ನ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಹ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link