ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ ದಾಖಲು…..!

ಬೆಂಗಳೂರು:

     ರಾಜ್ಯದ ಕರವಾಳಿಯಲ್ಲಿ ಭಾನುವಾರ ಒಂದೆರಡು ಕಡೆ ಮಳೆಯಾಗಿದ್ದು, ಉಳಿದೆಡೆ ಒಣ ಹವೆ ಇತ್ತು. ಇನ್ನು ಫೆ. 25ರಂದು ರಾಜ್ಯಾದ್ಯಂತ ಒಣ ಹವೆ (Karnataka Weather) ಇರುವ ಸಾಧ್ಯತೆಯಿದ್ದು, ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿ.ಸೆ. ಮತ್ತು 18 ಡಿ.ಸೆ. ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಇನ್ನು ಫೆ. 26ರಂದು ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದ್ದು, ಮಾರ್ಚ್‌ 2 ಮಾರ್ಚ್ 2025): ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ. ಮುಂದಿನ 3 ದಿನಗಳವರೆಗೆ ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ತೇವಾಂಶದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. 

   ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಭಾನುವಾರ ದಾವಣಗೆರೆಯಲ್ಲಿ ಅತೀ ಕಡಿಮೆ ಉಷ್ಣಾಂಶ 15 ಡಿ.ಸೆ. ದಾಖಲಾಗಿದೆ. ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ 36.9 ಡಿ.ಸೆ. ದಾಖಲಾಗಿದೆ.

   ಇನ್ನು ಕನಿಷ್ಠ ತಾಪಮಾನವು ಕರಾವಳಿಯಲ್ಲಿ 23-24 ಡಿ.ಸೆ. ವ್ಯಾಪ್ತಿಯಲ್ಲಿತ್ತು. ಉತ್ತರ ಒಳನಾಡಿನ ಬೆಳಗಾವಿ ವಿಮಾನ ನಿಲ್ದಾಣ, ಬೀದರ್, ವಿಜಯಪುರ, ಧಾರವಾಡ, ರಾಯಚೂರು, ಹಾವೇರಿ, ಬಾಗಲಕೋಟೆ ಮತ್ತು ಗದಗದಲ್ಲಿ 17-18 ಡಿ.ಸೆ., ಉತ್ತರ ಒಳನಾಡಿನ ಬೆಳಗಾವಿ ನಗರ, ಕಲಬುರಗಿ ಮತ್ತು ಕೊಪ್ಪಳ ದಲ್ಲಿ 19-21 ಡಿ.ಸೆ., ಮತ್ತು ದಕ್ಷಿಣ ಒಳನಾಡಿನ ಆಗುಂಬೆ, ಬೆಂಗಳೂರು ಏರ್ಪೋರ್ಟ್ (ಎಚ್‌ಎಎಲ್), ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಚಿಂತಾಮಣಿ, ಮಂಡ್ಯ ಮತ್ತು ಮಡಿಕೇರಿಯಲ್ಲಿ 13-18 ಡಿ.ಸೆ. ವ್ಯಾಪ್ತಿಯಲ್ಲಿತ್ತು.

    ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಏರ್ಪೋರ್ಟ್‌ (ಕೆಐಎಎಲ್), ಚಿತ್ರದುರ್ಗ, ಮೈಸೂರು ಮತ್ತು ಶಿವಮೊಗ್ಗ ದಲ್ಲಿ 18-21 ಡಿ.ಸೆ. ವ್ಯಾಪ್ತಿಯಲ್ಲಿತ್ತು.

   ಕನಿಷ್ಠ ತಾಪಮಾನವು ಕರಾವಳಿಯ ಪಣಂಬೂರಿನಲ್ಲಿ (-2.4 ಡಿ.ಸೆ.) ಇಳಿಕೆಯಾಗಿದೆ. ಉತ್ತರ ಒಳನಾಡಿನ ಹಾವೇರಿಯಲ್ಲಿ (-5.2 ಡಿ.ಸೆ.) ಮತ್ತು ಬೆಳಗಾವಿ ನಗರದಲ್ಲಿ (-3.0 ಡಿ.ಸೆ.) ಗಮನಾರ್ಹ ಕುಸಿತ (-2.7 ಡಿ.ಸೆ.) ಕೊಪ್ಪಳ -2.7 ಡಿ.ಸೆ.), (-2.2 ಡಿ.ಸೆ.), ಬೆಳಗಾವಿಯ ವಿಮಾನ ನಿಲ್ದಾಣ, ಧಾರವಾಡ ಮತ್ತು ರಾಯಚೂರಿನಲ್ಲಿ ಇಳಿಕೆಯಾಗಿದೆ. ದಕ್ಷಿಣ ಒಳನಾಡಿನ ಹಾಸನದಲ್ಲಿ (-6.1 ಡಿ.ಸೆ.) ಮತ್ತು ಆಗುಂಬೆಯ ಮೇಲೆ (-3.3 ಡಿ.ಸೆ.), ಚಿಂತಾಮಣಿಯಲ್ಲಿ (-3.1 ಡಿ.ಸೆ.) ಮಡಿಕೇರಿ(-3.2 ಡಿ.ಸೆ.), ಚಾಮರಾಜನಗರದಲ್ಲಿ (-2.6 ಡಿ.ಸೆ.) ಮೇಲೆ ಇಳಿಕೆಯಾಗಿದೆ. ರಾಜ್ಯದ ಉಳಿದ ಭಾಗಗಳಿಗಿಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.

   ಗರಿಷ್ಠ ತಾಪಮಾನವು ಕರಾವಳಿಯಲ್ಲಿ 34-36 ಡಿ.ಸೆ. ವ್ಯಾಪ್ತಿಯಲ್ಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ ಮತ್ತು ಹಾವೇರಿಯಲ್ಲಿ 32-34 ಡಿ.ಸೆ. ಮತ್ತು ವಿಜಯಪುರ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಬಾಗಲಕೋಟೆಯಲ್ಲಿ 31-37 ಡಿ.ಸೆ., ದಕ್ಷಿಣ ಒಳನಾಡಿನ ಚಿಕ್ಕಮಣಿ, ಚಿಕ್ಕಮಗಳೂರು, ಚಿಂತಾಮಣಿ, ಬೆಂಗಳೂರು, ಮೈಸೂರು ಮತ್ತು ಮಡಿಕೇರಿಯಲ್ಲಿ 31- 33 ಡಿ.ಸೆ. ಹಾಗೂ ದಕ್ಷಿಣ ಒಳನಾಡಿನ ಆಗುಂಬೆ, ಚಿತ್ರದುರ್ಗ, ಚಾಮರಾಜನಗರ, ದಾವಣಗೆರೆ, ಮಂಡ್ಯ ಮತ್ತು ಶಿವಮೊಗ್ಗದಲ್ಲಿ 34-35 ಡಿ.ಸೆ. ಇತ್ತು. 

  ಕಳೆದ 24 ಗಂಟೆಗಳಲ್ಲಿ, ದಕ್ಷಿಣ ಒಳನಾಡಿನ ಆಗುಂಬೆಯಲ್ಲಿ ಗರಿಷ್ಠ ತಾಪಮಾನದಲ್ಲಿ (+2.9°C) ಗಮನಾರ್ಹ ಏರಿಕೆಯಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Recent Articles

spot_img

Related Stories

Share via
Copy link