ಬೆಂಗಳೂರು
ಶೀಘ್ರದಲ್ಲೇ ಬೆಂಗಳೂರು-ಮುಂಬೈ ಮತ್ತು ಬೆಂಗಳೂರು-ಹೈದ್ರಾಬಾದ್ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದೆ. ವಿಧಾನಸೌಧದಲ್ಲಿಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ವಸತಿ ಮತ್ತು ಮೂಲಸೌಕರ್ಯ ಖಾತೆ ಸಚಿವ ವಿ.ಸೋಮಣ್ಣ ಈ ವಿಷಯ ತಿಳಿಸಿದ್ದಾರೆ.
ಮೈಸೂರು-ಬೆಂಗಳೂರು-ಚೆನ್ನೈ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಿದ್ದು ದೊಡ್ಡ ಮಟ್ಟದ ಯಶಸ್ಸು ಗಳಿಸಿದೆ.ಈಗ ಅದೇ ಮಾದರಿಯಲ್ಲಿ ಬೆಂಗಳೂರಿನಿAದ ವಾಣಿಜ್ಯ ನಗರಿ ಮುಂಬಯಿಗೆ ಮತ್ತು ಮುತ್ತಿನ ನಗರಿ ಹೈದ್ರಾಬಾದ್ ಗೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಲಿದೆ ಎಂದು ವಿವರಿಸಿದರು.
ಈ ಸಂಬಂಧ ಕೇಂದ್ರ ರೈಲ್ವೇ ಸಚಿವರು ಮತ್ತು ರೈಲ್ವೇ ಕಾರ್ಯದರ್ಶಿಗಳಿಗೆ ರಾಜ್ಯ ಸರ್ಕಾರ ಪತ್ರ ಬರೆದಿದ್ದು,ವಂದೇ ಭಾರತ್ ರೈಲನ್ನು ಬೆಂಗಳೂರು-ಮುAಬಯಿ ಮತ್ತು ಬೆಂಗಳೂರು-ಹೈದ್ರಾಬಾದ್ ನಡುವೆ ಸಂಚಾರಕ್ಕೆ ಬಿಡಲು ಉತ್ಸುಕತೆ ತೋರಿದ್ದಾರೆ ಎಂದರು. ಬೆಂಗಳೂರಿನಿಂದ ವಾಣಿಜ್ಯ ನಗರಿ ಮುಂಬಯಿ ಮತ್ತು ಬೆಂಗಳೂರಿನಿಂದ ಮುತ್ತಿನ ನಗರಿ ಹೈದ್ರಾಬಾದ್ ಗೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಿದರೆ ರಾಜ್ಯದ ಜನರಿಗೆ ತುಂಬ ಅನುಕೂಲವಾಗಲಿದೆ ಎಂದು ನುಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/03/Untitled-2-38.jpg)