ಅಯೋಧ್ಯೆ ರಾಮ ಮಂದಿರ : ವಿಗ್ರಹ ಪ್ರತಿಷ್ಠಾಪನೆಗೆ ಮೋದಿಗೆ ಅಹ್ವಾನ

ಅಯೋಧ್ಯೆ: 

      ಶ್ರೀರಾಮನ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಔಪಚಾರಿಕ ಆಹ್ವಾನವನ್ನು ಕಳುಹಿಸಿದೆ.

     ಈ ಸಮಾರಂಭವು ಮುಂದಿನ ವರ್ಷದ ಜನವರಿ ತಿಂಗಳಲ್ಲಿ ನಡೆಯಲಿದೆ ಮತ್ತು ಸುಮಾರು 10,000 ಅತಿಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. 

    ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾತನಾಡಿ, ನಾವು ಜನವರಿ 15 ಮತ್ತು 24 ರ ನಡುವೆ ಕಾರ್ಯಕ್ರಮವನ್ನು ನಡೆಸಲು ದಿನಾಂಕಗಳನ್ನು ಗೊತ್ತು ಮಾಡಿದ್ದೇವೆ. ಆದರೂ, ಈ ಪೈಕಿ ನಿಖರವಾದ ದಿನಾಂಕವನ್ನು ಪ್ರಧಾನಿ ಮೋದಿ ನಿರ್ಧರಿಸಲಿದ್ದಾರೆ ಎಂದರು. 

    ಅಯೋಧ್ಯೆ ಆಡಳಿತ ಮಂಡಳಿಯು ಭದ್ರತಾ ಏಜೆನ್ಸಿಗಳೊಂದಿಗೆ ಸಹಕರಿಸುತ್ತಿದೆ. ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸುವ ಸಾಧ್ಯತೆಯಿದ್ದು, ಯಾವುದೇ ತೊಂದರೆಯಾಗದಂತೆ ಕಾರ್ಯಕ್ರಮವನ್ನು ಏರ್ಪಡಿಸಬೇಕಿದೆ. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ