ಗಾಯಕ ವಿಜಯ್‌ ಕಿಚ್ಲು ಇನಿಲ್ಲ..!

ಬೆಂಗಳೂರು :

     ಖ್ಯಾತ ಶಾಸ್ತ್ರೀಯ ಗಾಯಕರಾದ ಶ್ರೀಯುತ ವಿಜಯ್ ಕಿಚ್ಲು ಅವರು  ಶುಕ್ರವಾರ ಹೃದಯ ಸಂಬಂಧಿ ಖಾಯಿಲೆಯಿಂದ ನಿಧನರಾದರು.

    ಕೋಲ್ಕತ್ತಾದಲ್ಲಿನ ವುಡ್‌ಲ್ಯಾಂಡ್ಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬಿಡುಗಡೆ ಮಾಡಿದ ಹೇಳಿಕೆ ಪ್ರಕಾರ ಅವರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪ್ರಾರಂಭವಾಗುವ ಮೊದಲು ಅವರು ಹೃದಯ ಸ್ತಂಭನದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

   ಜನವರಿಯಲ್ಲಿ ಎರಡು ವಾರಗಳ ಕಾಲ ಹೃದಯ ವೈಫಲ್ಯದಿಂದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಕಿಚ್ಲು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಧ್ರುಪದ್ ಮತ್ತು ಖಯಾಲ್ ಪ್ರಕಾರಗಳನ್ನು ಅಧ್ಯಯನ ಮಾಡಿದವರು. ಹೊಸ ಕಲಾವಿದರನ್ನು ಉತ್ತೇಜಿಸಲು ಹೆಸರುವಾಸಿಯಾಗಿದ್ದರು.

    ಅವರು ಕೋಲ್ಕತ್ತಾದ ITC ಸಂಗೀತ ಸಂಶೋಧನಾ ಅಕಾಡೆಮಿಯ ಸಂಸ್ಥಾಪಕರಾಗಿದ್ದರು ಮತ್ತು 25 ವರ್ಷಗಳ ಕಾಲ ಅದರ ಮುಖ್ಯಸ್ಥರಾಗಿದ್ದರು. ಅವರಿಗೆ 2018 ರಲ್ಲಿ ಕಲೆ-ಸಂಗೀತ ವಿಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಯಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap