ಬೆಂಗಳೂರು:
ಬಸವರಾಜ ಬೊಮ್ಮಾಯಿ ಸರ್ಕಾರದ ಸಂಪುಟ ಪುನಾರಚನೆ ಇನ್ನು ಒಂದೆರಡು ದಿನಗಳಲ್ಲಿ ನಡೆಯಲಿದೆ. ಹೀಗಾಗಿ ಮೇ 11 ರಂದು ಗುರುವಾರ ಸಂಪುಟ ಸಭೆ ನಿಗದಿಯಾಗಿದೆ.ಸಂಪುಟ ಪುನಾರಚನೆ ಸಂಬಂಧ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದರು.
ಫ್ರಾನ್ಸ್ನಲ್ಲಿ ಮೋದಿ: ನೂತನ ಅಧ್ಯಕ್ಷ ಮ್ಯಾಕ್ರನ್ ಜೊತೆ ಮೋದಿ ವಿಶೇಷ ಸ್ನೇಹ
ಸಿಎಂ ಬೊಮ್ಮಾಯಿ ಅವರ ಜೊತೆ ಯಾರ್ಯಾರನ್ನು ಕೈ ಬಿಡಬೇಕು ಮತ್ತು ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಎಂದು ವರದಿಯಾಗಿದೆ.ಸಂಪುಟ ಪುನಾರಚನೆ ನಿರ್ಧಾರದೊಂದಿಗೆ ಅಮಿತ್ ಶಾ ಬೆಂಗಳೂರಿಗೆ ಬಂದಿದ್ದರು. ಇನ್ನು ಎರಡು ಮೂರು ದಿನಗಳಲ್ಲಿ ಸಂಪುಟ ಪುನಾರಚನೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಂಗಳವಾರ ಹೇಳಿದ್ದರು.
ದೇಶದಲ್ಲಿ ನಿನ್ನೆಗಿಂತಲೂ ಇಂದು ಹೆಚ್ಚು ಕೊರೊನಾ ಪ್ರಕರಣಗಳು ದಾಖಲು; 55 ಮಂದಿ ಸಾವು, ಸಕ್ರಿಯ ಕೇಸ್ಗಳು 19,719
ಸದ್ಯದಲ್ಲೇ ಪಟ್ಟಿ ಹೊರಬೀಳುವ ಸಾಧ್ಯತೆ ಯಿದೆ, ಶುಕ್ರವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸ ಮುಗಿಸಿ ಮರಳಿದ ಬಳಿಕ ಬದಲಾವಣೆಗಳು ಆಗಬಹುದು. ಮೇ 10 ರ ಮೊದಲು ಹೊಸ ಮಂತ್ರಿಗಳ ಪ್ರಮಾಣ ವಚನವು ನಡೆಯಲಿದೆ ಎಂದು ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿವೆ.
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ: ನಾರ್ಡಿಕ್ ದೇಶಗಳಿಂದ ಭಾರತಕ್ಕೆ ಬೆಂಬಲ
ಕಂದಾಯ ಸಚಿವ ಆರ್.ಅಶೋಕ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಣ್ಣ ಕೈಗಾರಿಕೆ ಸಚಿವ ಎಂ.ಟಿ.ಬಿ.ನಾಗರಾಜ್, ವಸತಿ ಸಚಿವ ವಿ.ಸೋಮಣ್ಣ, ಮಹಿಳಾ ಅಭಿವೃದ್ಧಿ, ಮುಜರಾಯಿ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಮತ್ತು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ ಎನ್ನಲಾಗಿದೆ. ಹಲವು ಕಾರಣಗಳಿಗಾಗಿ ಈ ಸಚಿವರನ್ನು ಸಂಪುಟದಿಂದ ಹೊರಗಿಡಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿವೆ.
IPL 2022..ಚೆನ್ನೈ ವಿರುದ್ಧ RCB ತಂಡಕ್ಕೆ ಭರ್ಜರಿ ಗೆಲುವು: ನಾಲ್ಕನೇ ಸ್ಥಾನಕ್ಕೆ ಲಗ್ಗೆ ಇಟ್ಟ ರಾಯಲ್ ಚಾಲೆಂಜರ್ಸ್
ನಿಷ್ಠಾವಂತರಿಗೆ ಪಕ್ಷ ಸಂಘಟನೆ ಜವಾಬ್ದಾರಿ ವಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ, ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಬಿಬಿಎಂಪಿ ಚುನಾವಣೆ ಹೊಣೆಗಾರಿಕೆ ನೀಡಲಾಗುವುದು ಎಂದು ತಿಳಿದು ಬಂದಿದೆ.
ಇನ್ನೂ ಸುಧಾಕರ್ ಅವರ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಿರುವುದರ ಹಿನ್ನೆಲೆಯಲ್ಲಿ ಹೈಕಮಾಂಡ್ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ, ಇನ್ನೂ ಇತ್ತೀಚೆಗಷ್ಟೆ ಸಚಿವ ಎಂಟಿಬಿ ನಾಗರಾಜ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ತಪ್ಪು ಮಾಡಿದೆ ಎಂಬ ಹೇಳಿಕೆ ನೀಡಿದ್ದರು ಇದು ಪಕ್ಷಕ್ಕೆ ಮುಜುಗರ ಉಂಟು ಮಾಡಿತ್ತು. ಹೀಗಾಗಿ ಎಂಟಿಬಿ ನಾಗರಾಜ್ ಬೆಲೆ ತೆತ್ತಲಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣ: ಪ್ರಿಯಾಂಕ್ ಖರ್ಗೆಗೆ ಸಿಐಡಿಯಿಂದ ಮೂರನೇ ನೋಟಿಸ್ ಜಾರಿ
ಪಿ ರಾಜೀವ್, ರಾಜುಗೌಡ, ಪ್ರೀತಂ ಗೌಡ, ಪೂರ್ಣಿಮಾ ಶ್ರೀನಿವಾಸ್, ಎನ್ ಮಹೇಶ್, ಅರವಿಂದ್ ಬೆಲ್ಲದ್, ಬಿ ವೈ ವಿಜಯೇಂದ್ರ, ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಇತರ ಕೆಲವು ನಾಯಕರು ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸುಳಿವು ಇದೆ. ವಿಶೇಷವಾಗಿ ಗೃಹ ಖಾತೆಯ ಪುನರ್ರಚನೆಯೂ ಆಗಬಹುದು. ಸಂದರ್ಭಗಳನ್ನು ಸೂಕ್ಷ್ಮವಾಗಿ ನಿಭಾಯಿಸಬಲ್ಲ ಶಾಸಕರಿಗೆ ಗೃಹ ಖಾತೆ ನೀಡಲಾಗುವುದು ಎಂದು ಹೇಳಲಾಗುತ್ತಿದೆ.
ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೀಘ್ರ ‘ವೇತನ ಹೆಚ್ಚಳ’ಕ್ಕೆ ರಾಜ್ಯ ಸರ್ಕಾರ ನಿರ್ಧಾರ
ಹಾಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಆರ್ಡಿಪಿಆರ್ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಆಯಾ ನಾಯಕರಿಗೆ ಡಿಸಿಎಂ ಹುದ್ದೆಯನ್ನು ರಚಿಸಲು ಪಕ್ಷದ ಕಾರ್ಯಕರ್ತರಿಂದ ಬೇಡಿಕೆಯಿದೆ, ಆದರೆ ಹೈಕಮಾಂಡ್ ಈ ಬಗ್ಗೆ ಗಮನ ಹರಿಸುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ.
ಸ್ನೇಹಿತೆಯ ಮದುವೆಗೆ ತೆರಳಿ ವಿವಾದಕ್ಕೀಡಾದ ರಾಹುಲ್ ಗಾಂಧಿ: ಇವರು ಯಾರು ಗೊತ್ತೇ?
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
