ಬೆಂಗಳೂರು:
ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಪಂದ್ಯ ಸೋತ ಬೆನ್ನಲ್ಲೇ ಭಾರತ ತಂಡ ಉಳಿದಿರುವ ಎರಡು ಟೆಸ್ಟ್ ಪಂದ್ಯಗಳಿಗೆ ತಂಡದಲ್ಲಿ ಕೆಲ ಬದಲಾವಣೆ ಮಾಡಿದೆ. ಚೆನ್ನೈಯ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಸರ್ಪಡೆಗೊಳಿಸಲಾಗಿದೆ.
ವಾಷಿಂಗ್ಟನ್ ಸುಂದರ್ ಅವರು ಎರಡನೇ ಟೆಸ್ಟ್ಗೆ ಮುಂಚಿತವಾಗಿ ಪುಣೆಯಲ್ಲಿ ತಂಡದೊಂದಿಗೆ ಸೇರಿಕೊಳ್ಳುತ್ತಾರೆ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ರಣಜಿ ಟ್ರೋಫಿ ಪಂದ್ಯದಲ್ಲಿ ದೆಹಲಿ ವಿರುದ್ಧ ನಡೆದ ಪಂದ್ಯದಲ್ಲಿ ತಮಿಳುನಾಡು ಪರ 25 ರ ಹರೆಯದ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ 152 ರನ್ ಚಚ್ಚಿದ್ದರು. 2021 ರಲ್ಲಿ ಗಾಬಾದಲ್ಲಿ ಆಸ್ಟ್ರೇಲಿಯ ವಿರುದ್ಧದ ಭಾರತದ ಐತಿಹಾಸಿಕ ಗೆಲುವಿನಲ್ಲಿಯೂ ವಾಷಿಂಗ್ಟನ್ ನಿರ್ಣಾಯಕ ಪಾತ್ರವನ್ನು ವಹಿಸಿದ್ದರು.
ಆ ಪಂದ್ಯವು ಅವರ ಟೆಸ್ಟ್ ಚೊಚ್ಚಲ ಪಂದ್ಯವಾಗಿತ್ತು. ನಾಲ್ಕು ಟೆಸ್ಟ್, 22 ಏಕದಿನ ಮತ್ತು 52 ಟಿ 20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ ಅನುಭವ ವಾಷಿಂಗ್ಟನ್ ಸುಂದರ್ ಹೊಂದಿದ್ದಾರೆ. ರವೀಂದ್ರ ಜಡೇಜಾ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಸಂಪೂರ್ಣ ವಿಫಲರಾಗಿದ್ದರು. ಹೀಗಾಗಿ ಅವರನ್ನು ದ್ವಿತೀಯ ಟೆಸ್ಟ್ನಿಂದ ಹೊರಗಿಟ್ಟು ಅವರ ಸ್ಥಾನಕ್ಕೆ ಸುಂದರ್ ಅವರನ್ನು ಆಡಿಸಿದರೂ ಅಚ್ಚರಿಯಿಲ್ಲ. ಎರಡನೇ ಟೆಸ್ಟ್ ಪಂದ್ಯ ಅಕ್ಟೋಬರ್ 24 ರಿಂದ ಪುಣೆಯಲ್ಲಿ ಆರಂಭವಾಗಲಿದೆ
