ನಾವು ಪಾಕಿಸ್ತಾನದ ಮುಸ್ಲಿಮರಲ್ಲ ನಾವು ಭಾರತೀಯ ಮುಸ್ಲಿಮರು : ಜಮೀರ್ ಅಹ್ಮದ್ ಖಾನ್

ಬೆಂಗಳೂರು:

ನಾವು ಪಾಕಿಸ್ತಾನದ ಮುಸ್ಲಿಮರಲ್ಲ ನಾವು ಭಾರತೀಯ ಮುಸ್ಲಿಮರು. ಶಾಂತಿ ಸಹಭಾಳ್ವೆ ನಮ್ಮ ಮೊದಲ ಆದ್ಯತೆ ಎಂದು ಚಾಮರಾಜಪೇಟೆ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು. ನಾವು ಗೌರವದಿಂದ ಇಲ್ಲಿ ಬಾಳುತ್ತಿದ್ದೇವೆ ಮುಂದೆಯೂ ಗೌರವಯುತವಾಗಿ ಇರುತ್ತೇವೆ ಪಾಕಿಸ್ತಾನದಿಂದ ಬಂದವರಲ್ಲ ನಾವು ಭಾರತೀಯ ಮುಸ್ಮಿಮರು ಎಂದು ಅವರು ತಿಳಿಸಿದ್ದಾರೆ.

ರಾಮನವಮಿ ದಿನವೇ ಶ್ರೀರಾಮನ ಭಕ್ತರಿಗೆ ಸಿಹಿ ಸುದ್ದಿ: ಡಿ. 2023 ರೊಳಗೆ ಅಯೋಧ್ಯೆ ರಾಮಮಂದಿರ ಕಾಮಗಾರಿ ಪೂರ್ಣ

ಸಾವಿನ ಮನೆಯಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅದು ತಪ್ಪು ಈ ಹಿಂದಿನಿಂದಲೂ ಚಾಮರಾಜಪೇಟೆಯಲ್ಲಿ ನಾನು ಶಾಸಕನಾಗಿರುವುದಕ್ಕಿಂತ ಮುಂಚೆ ಒಂದಲ್ಲ ಒಂದು ರೀತಿಯಲ್ಲಿ ಗಲಭೆಗಳು. ಕೋಮು ಸಂಘರ್ಷಗಳು ನಡೆಯುತ್ತಿತ್ತು. ಆದರೆ ಈಗ ನಾನು ಶಾಸಕನಾದ ಮೇಲೆ ಒಂದೇ ಒಂದು ಗಲಭೆಗಳು ಇಲ್ಲಿ ನಡೆದಿಲ್ಲ ಶಾಂತಿಯುತವಾಗಿರುವುದನ್ನು ಗಮನಿಸಿದ ಬಿಜೆಪಿ ಮುಖಂಡರು ಇಲ್ಲಿ ಯಾವುದಾದರೂ ಒಂದು ರೀತಿಯಲ್ಲಿ ಗಲಭೆಯನ್ನು ಸೃಷ್ಟಿಸಬೇಕೆಂಬ ಉದ್ದೇಶದಿಂದ ಚಂದ್ರುವಿನ ಕೊಲೆಯನ್ನು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅಮೆರಿಕದ 1 ಸಾವಿರ ಥಿಯೇಟರ್ ಗಳಲ್ಲಿ ಕೆಜಿಎಫ್ 2 ಬಿಡುಗಡೆ; ಚಿತ್ರದ ಮೊದಲ ದಿನದ ಗಳಿಕೆಯೇ 250 ಕೋಟಿ?

ಆದರೆ ಯಾವುದೇ ಕಾರಣಕ್ಕೂ ಇದನ್ನು ಮಾಡಲು ನಾವು ಬಿಡುವುದಿಲ್ಲ ಎಂದು ತಿಳಿಸಿದ ಶಾಸಕರು. ಮುಂಬರುವ ದಿನಗಳಲ್ಲಿ ಚಾಮರಾಜಪೇಟೆ ಇನ್ನಷ್ಟು ಶಾಂತಿಯ ನೆಲೆವೀಡು ಆಗಲಿದೆ ಎಂದು ತಿಳಿಸಿದರು ಚಂದ್ರು ಸಾವಿನ ನಂತರ ತನಿಖೆ ನಡೆಸಿದಂತಹ ನಗರ ಪೊಲೀಸ್ ಆಯುಕ್ತರು ಇದೊಂದು ಕೊಲೆ.

ಒಂದು ರೋಲ್ ವಿಚಾರಕ್ಕೆ ನಡೆದಂತಹ ಕೊಲೆ ಎಂದು ಕಮಿಷನರ್ ತಿಳಿಸಿದ್ದಾರೆ. ಆದರೆ ಬಿಜೆಪಿಯವರು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು ಬಿಜೆಪಿಯವರ ಈ ತಂತ್ರಕ್ಕೆ ಯಾರು ಮತದಾರರು ನಮ್ಮ ಕ್ಷೇತ್ರದವರು ಮಣಿಯಬಾರದು ಶಾಂತಿ ಸಹಬಾಳ್ವೆಯಿಂದ ನಾವು ಇರಬೇಕು ಎಂದು ಕರೆನೀಡಿದರು. ಎಲ್ಲರೂ ಒಂದೇ ಇಲ್ಲಿ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ತಿಳಿಸಿದರು

ಬಿ ಝಡ್ ಜಮೀರ್ ಅಹಮದ್ ಖಾನ್
ಶಾಸಕರು ಹಾಗೂ ಮಾಜಿ ಸಚಿವರು. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ

RRR 1000cr: ಸಾವಿರ ಕೋಟಿ ಕ್ಲಬ್ ಸೇರಿದ RRR: ‘ದಂಗಲ್’ ದಾಖಲೆ ಮುರಿಯಲು ಇನ್ನೆಷ್ಟು ಬೇಕು?

 

                        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link