ಬೆಂಗಳೂರು :
ಜಾಗತಿಕ ಸವಾಲುಗಳನ್ನು ಎದುರಿಸಲು ಭಾರತವು ಸಹಯೋಗದ ಪ್ರಯತ್ನಗಳಿಗೆ ಮಹತ್ವ ನೀಡುತ್ತಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಜಿ-20 ಹಣಕಾಸು ಸಚಿವರು ಹಾಗೂ ಕೇಂದ್ರೀಯ ಬ್ಯಾಂಕುಗಳ ಪ್ರತಿನಿಧಿಗಳ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದ ಸಚಿವರು, ಭಾರತ ಜಿ-20 ಅಧ್ಯಕ್ಷತೆ ವಹಿಸಿದ ಬಳಿಕ ಬೆಂಗಳೂರಿನಲ್ಲಿ ನಡೆಯುತ್ತಿರುವ ಎರಡನೇ ಸಭೆಯಲ್ಲಿ ಪ್ರತಿನಿಧಿಗಳ ನಿಯೋಗವು ಜಾಗತಿಕ, ಆರ್ಥಿಕ ಸವಾಲುಗಳು, ತೆರಿಗೆ ಸುಧಾರಣೆ, ಆಹಾರ ಭದ್ರತೆ ಕುರಿತು ಸಮಾಲೋಚನೆಗಳು ನಡೆಯಲಿವೆ ಎಂದರು.
ಇದೇ 24 ಮತ್ತು 25ರಂದು ನಡೆಯಲಿರುವ ಹಣಕಾಸು ಸಚಿವರು ಹಾಗೂ ಕೇಂದ್ರೀಯ ಬ್ಯಾಂಕುಗಳ ಗವರ್ನರ್ಗಳ ಸಭೆಯಲ್ಲಿ ಪೂರ್ವಭಾವಿ ಸಮಾಲೋಚನೆಯ ಸಭೆಯಲ್ಲಿ ತೆಗೆದುಕೊಂಡಿರುವ ಸಲಹೆಗಳಿಗೆ ಅಂತಿಮ ಅನುಮೋದನೆ ದೊರೆಯಲಿದೆ ಎಂದು ಅವರು ತಿಳಿಸಿದರು.
ಕಳೆದ ವರ್ಷ ನವೆಂಬರ್ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಿ-20 ರಾಷ್ಟçದ ಅಧ್ಯಕ್ಷ ಸ್ಥಾನ ಪಡೆದ ಬಳಿಕ ಜಾಗತಿಕ ಮಟ್ಟದಲ್ಲಿ ಸುಸ್ಥಿರ ಬೆಳವಣಿಗೆಗೆ ತೆಗೆದುಕೊಳ್ಳಬೇಕಾದ ಎಲ್ಲ ಕ್ರಮಗಳ ಬಗ್ಗೆ ಸುಧೀರ್ಘ ಚರ್ಚೆ ನಡೆಸಿ, ತೀರ್ಮಾನ ತೆಗೆದುಕೊಳ್ಳಲು ಹಲವು ಸಭೆಗಳು ಮುಂದುವರೆಯಲಿದೆ. ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದಂತೆ ವಸುದೈವ ಕುಟುಂಬಕಂ ಎಂಬ ಧ್ಯೇಯೋದ್ದೇಶ ದಿಂದ ವಿಶ್ವದ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವುದರ ಜೊತೆಗೆ ಅವುಗಳ ಅನುಷ್ಠಾನಕ್ಕೆ ಮಾರ್ಗಸೂಚಿಯನ್ನು ಸಹ ಪ್ರಕಟಿಸಿಲು ಸಭೆ ಸರ್ವಸಮ್ಮತ ತೀರ್ಮಾನವನ್ನು ತೆಗೆದುಕೊಳ್ಳಲಿದೆ ಎಂದರು.
ಜಿ-20 ದೇಶಗಳ ಪ್ರತಿನಿಧಿಗಳು ಮಟ್ಟದಲ್ಲಿ ಆರ್ಥಿಕ ಸುಧಾರಣೆ, ಆರೋಗ್ಯ ವಲಯದಲ್ಲಿ ಸುಧಾರಣೆ, ತೆರಿಗೆ ಅಳವಡಿಕೆ ಹಾಗೂ ದೇಶೀಯವಾಗಿ ಬೆಳವಣಿಗೆಯನ್ನು ವೃದ್ಧಿಸುವ ನೀತಿಯನ್ನು ರೂಪಿಸಲು ಸರ್ವಸಮ್ಮತ ಅಭಿಪ್ರಾಯ ಪ್ರಕಟಿಸಬೇಕಾಗಿದ್ದು, ವಿಸ್ತತ ಚರ್ಚೆ ನಡೆಯಬೇಕು ಎಂದು ಹೇಳಿದರು. ಇದೇ 24 ಮತ್ತು 25 ರಂದು ನಡೆಯಲಿರುವ ಸಭೆಯಲ್ಲಿ ಜಾಗತಿಕ ಆರ್ಥಿಕತೆ, ಆರೋಗ್ಯ ಮತ್ತು ತೆರಿಗೆಗೆ ಸಂಬಂಧಿಸಿದ ವಿಷಯಗಳ ಕುರಿತು ಉನ್ನತ ಮಟ್ಟದ ಸಮಿತಿ ಚರ್ಚೆ ನಡೆಯಲಿದೆ.
ಹಣಕಾಸು ಸಚಿವರು, ಗವರ್ನರ್ಗಳು ಮತ್ತು ಭೇಟಿ ನೀಡುವ ನಿಯೋಗಕ್ಕಾಗಿ ಭಾರತದ ವೈವಿಧ್ಯಮಯ ಪಾಕಪದ್ಧತಿ ಮತ್ತು ಪ್ರದರ್ಶಿಸುವ ಔತಣ ಕೂಟದೊಂದಿಗೆ ಸಂವಾದ ಮತ್ತು ಕನ್ನಡನಾಡಿನ ಶ್ರೀಮಂತ ಸಂಸ್ಕೃತಿ ಪ್ರದರ್ಶಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ 26 ರಂದು ರಾಜ್ಯದ ಮತ್ತು ಪಾರಂಪರಿಕ ತಾಣಗಳನ್ನು ವೀಕ್ಷಿಸಲು ವಿಹಾರದ ಆಯ್ಕೆಗಳನ್ನು ಒದಗಿಸಲಾಗಿದೆ ಎಂದು ಅವರು ವಿವರಿಸಿದರು.
ದೇಶ-ವಿದೇಶಗಳ ನೂರಾರು ಹಣಕಾಸು ತಜ್ಞರು ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ದೇಶಗಳ ಈ ಸಭೆಯ ಪೂರ್ವಭಾವಿಯಾಗಿ ಇಂದು ಮತ್ತು ನಾಳೆ ಹಣಕಾಸು ಮತ್ತು ಕೇಂದ್ರೀಯ ಬ್ಯಾಂಕ್ ಪ್ರತಿನಿಧಿಗಳ ಸಭೆ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟಲ್ನಲ್ಲಿ ಆಯೋಜಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
