ಯಾವಾಗ ಏನಾಗಬಹುದು ಊಹೆ ಮಾಡಲು ಸಾಧ್ಯವಿಲ್ಲ :ಖಾದರ್‌

ಬೆಳಗಾವಿ:

    ಸಂಸತ್ ಸ್ಮೋಕ್‌ ಬಾಂಬ್ ಪ್ರಕರಣ ನಮಗೆ ಎಚ್ಚರಿಕೆ ಗಂಟೆ ಎಂದು ವಿಧಾನಸಭಾ ಸ್ಪೀಕರ್‌ ಯುಟಿ ಖಾದರ್‌ ಹೇಳಿದ್ದಾರೆ.ಯಾವಾಗ ಏನಾಗಬಹುದು ಎಂದು ಊಹೆ ಮಾಡಲು ಸಾಧ್ಯವಿಲ್ಲ. ಜನಸಾಮಾನ್ಯರು ಸಹಕಾರ ಕೊಡಬೇಕು. ಜನರಿಗೆ ಪಾಸ್ ಕೊಡುವಾಗ ಅವರ ನೈಜತೆ ನೋಡಿಕೊಂಡು ಪಾಸ್ ಕೊಡಲು‌ ಸೂಚಿಸಲಾಗಿದೆ ಎಂದರು.

     ವಿದ್ಯಾರ್ಥಿಗಳಿಗೆ, ಸತ್ಪ್ರಜೆಗಳಿಗೆ ತೊಂದರೆ ಆಗದಂತೆ ಪಾಸ್ ವಿತರಣೆಗೆ ಸೂಚಿಸಲಾಗಿದೆ. ಹೆಚ್ಚು ತಪಾಸಣೆ ಮೂಲಕ ಸುವರ್ಣಸೌಧಕ್ಕೆ ಪ್ರವೇಶ ನೀಡಲಾಗಿದೆ. ಜನ ಸಾಮಾನ್ಯರು ಸಹಕರಿಸಬೇಕು ಎಂದು ಹೇಳಿದರು.ಸಂಸತ್‌ ಮೇಲೆ ದಾಳಿ ನಡೆದ ಬೆನ್ನಲ್ಲೇ ಸುವರ್ಣಸೌಧದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದ್ದು ಪಾಸ್ ವಿತರಣೆ ವ್ಯವಸ್ಥೆಯಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap