ಶೇ. 17ರಷ್ಟು ವೇತನ ಹೆಚ್ಚಳ: ಲಿಖಿತ ಆದೇಶ ಬೇಕು ಎಂದ ನೌಕರರು

ಬೆಂಗಳೂರು

     7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕದ ಸರ್ಕಾರಿ ನೌಕರರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.ಸರ್ಕಾರ  ಮುಷ್ಕರಕ್ಕೆ ಕರೆ ನಿಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಅದು ವಿಫಲವಾಗಿದೆ ಮತ್ತು ಲಿಖಿತ ರೂಪದಲ್ಲಿ ಆದೇಶ ನೀಡುವವರೆಗೂ ನಾವು ಹಿಂದೆ ಸರಿಯುವ ಮಾತೆ ಇಲ್ಲ ಎಂದು ಸಿ ಎಸ್‌ ಷಡ್ಕಶರಿ ತಿಳಿಸಿದ್ದಾರೆ.

    ಬುಧವಾರ ಬೆಳಗ್ಗೆ ಬಸವರಾಜ ಬೊಮ್ಮಾಯಿ ಅವರ ಆರ್. ಟಿ. ನಗರ ನಿವಾಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಕ್ಷರಿ ನೇತೃತ್ವದಲ್ಲಿ ಹಲವು ಪದಾಧಿಕಾರಿಗಳು ಭೇಟಿ ನೀಡಿದರು. ನೌಕರರ ಬೇಡಿಕೆ ಕುರಿತು ಮುಖ್ಯಮಂತ್ರಿಗಳು ನಿಯೋಗದ ಜೊತೆ ಸುದೀರ್ಘ ಮಾತುಕತೆಯನ್ನು ನಡೆಸಿದರು.ಇನ್ನೂ ಎರಡು ಗಂಟೆಯಲ್ಲಿ ತೀರ್ಮಾನವನ್ನು ಪ್ರಕಟಿಸಲಾಗುತ್ತದೆ ಎಂದು ಸರ್ಕಾರ ಭರವಸೆ ನೀಡಿದೆ.

     ಮುಖ್ಯಮಂತ್ರಿಗಳ ಜೊತೆಗಿನ ಸಭೆಯ ಬಳಿಕ ಮಾತನಾಡಿದ ಸಿ. ಎಸ್. ಷಡಕ್ಷರಿ, “ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆಗಳು ನಿರಂತರವಾಗಿ ನಡೆಯುತ್ತಿವೆ. ಸರ್ಕಾರ ಎರಡು ಗಂಟೆಯಲ್ಲಿ ತನ್ನ ನಿರ್ಧಾರ ತಿಳಿಸಲಿದೆ. ಅಧಿಕಾರಿಗಳ ಜೊತೆ ಚರ್ಚಿಸಿ ಹೇಳುತ್ತೇನೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಬಳಿಕ ನಾವು ಹೋರಾಟ ವಾಪಸ್ ಪಡೆಯುವ ಅಥವ ಮುಂದುವರೆಸುವ ಕುರಿತು ತೀರ್ಮಾನ ಕೈಗೊಳ್ಳುತ್ತೇವೆ” ಎಂದರು.

       7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಷ್ಕರ ನಡೆಸದಂತೆ ಸರ್ಕಾರಿ ನೌಕರರಿಗೆ ಮನವಿ ಮಾಡಿದ್ದರು. ಆದರೆ ಇದಕ್ಕೆ ನೌಕರರು ಒಪ್ಪಿರಲಿಲ್ಲ. ವೇತನ ಆಯೋಗದ ಶಿಫಾರಸು ಜಾರಿ ಬಗ್ಗೆ ಲಖಿತ ಭರವಸೆಯಲ್ಲ, ಸರ್ಕಾರಿ ಆದೇಶ ಬೇಕು ಎಂದು ನೌಕರರು ಪಟ್ಟುಹಿಡಿದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap