ಹೈದರಾಬಾದ್:
ತೆಲಂಗಾಣದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಲ್ಲಿ ರಾಜ್ಯ ಸಚಿವಾಲಯದ ಮೇಲಿನ ಗುಮ್ಮಟವನ್ನು ತೆರವುಗೊಳಿಸಲಾಗುವುದು ಎಂದು ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಹೇಳಿದ್ದಾರೆ.
ಐಟಿ ಸಚಿವ ಕೆಟಿ ರಾಮ ರಾವ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ಸಚಿವಾಲಯಕ್ಕೆ ಸಿಎಂ ಎಂದಿಗೂ ಹೋಗದೇ ಇದ್ದಾಗ, ಹಳೆಯ ಕಟ್ಟಡವನ್ನು ಧ್ವಂಸಗೊಳಿಸುವ ಅಗತ್ಯವೇನಿತ್ತು? ಹೊಸ ಸಚಿವಾಲಯ ಕಟ್ಟಡದ ನಿರ್ಮಾಣಕ್ಕೆ ಅಂದಾಜು ಮೊತ್ತ 400 ಕೋಟಿಯಾಗಿತ್ತು ಈಗ ಅದು 1,700 ಕೋಟಿಯಾಗಿದೆ ಎಂದು ಸಂಜಯ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
