ಲಿಖಿತ ರೂಪದಲ್ಲಿ ನೀಡಿದರೆ ಮಾತ್ರ ಮುಷ್ಕರ ವಾಪಸ್‌ : ಸಿ. ಎಸ್. ಷಡಾಕ್ಷರಿ

ಬೆಂಗಳೂರು

       ಸರ್ಕಾರಿ ನೌಕರರು ಮಾರ್ಚ್ 1ರಿಂದ ಉದ್ದೇಶಿಸಿರುವ ಉದ್ಯೋಗಕ್ಕೆ ಗೈರು ಹಾಜರಿ ಅನಿರ್ಧಿಷ್ಟಾವಧಿ  ಮುಷ್ಕರಕ್ಕೆ  ಕರೆ ನೀಡಿದ್ದಾರೆ. ಅವರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿದ್ದು, ಮುಷ್ಕರದ ಕರೆ ವಾಪಸ್ ಪಡೆಯಬೇಕೆಂದರೆ ಸರ್ಕಾರ ಲಿಖಿತ ರೂಪದಲ್ಲಿ ಭರವಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

     ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. “7ನೇ ವೇತನ ಆಯೋಗದ ಮಧ್ಯಂತರ ವರದಿ ಅನುಷ್ಠಾನದ ಬಗ್ಗೆ ಸರ್ಕಾರ ಆದೇಶ ಹೊರಡಿಸಿದರೆ ಮಾತ್ರ ಮಾರ್ಚ್ 1ರಿಂದ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ವಾಪಸ್ ಪಡೆದುಕೊಳ್ಳಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

    ಕರ್ನಾಟಕ ಸರ್ಕಾರದ ಮುಂದೆ ಈಗಾಗಲೇ ಜುಲೈ 1, 2022ರಿಂದ ಜಾರಿಗೆ ಬರುವಂತೆ ಶೇ 40ರಷ್ಟು ವೇತನ ಹೆಚ್ಚಳ ಸೌಲಭ್ಯ ಒದಗಿಸಬೇಕು. ಎನ್‌ಪಿಎಸ್ ರದ್ದುಗೊಳಿಸಬೇಕು, ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು ಎಂಬ ಬೇಡಿಕೆಗಳನ್ನು ಇಡಲಾಗಿದೆ. ಬಜೆಟ್‌ ಭಾಷಣದಲ್ಲಿ 7ನೇ ವೇತನ ಆಯೋಗದ ಬಗ್ಗೆ ಸರ್ಕಾರ ಯಾವುದೇ ಪ್ರಸ್ತಾವನೆ ಮಾಡಿಲ್ಲ ಎಂದು ರಾಜ್ಯ ಸರ್ಕಾರಿ ನೌಕರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ 2023-24ನೇ ಸಾಲಿನ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap