ಬೆಂಗಳೂರು:
ಮೇ 10 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಸುಮಾರು 40 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಶುಕ್ರವಾರ ಮಾಜಿ ಶಾಸಕರಾದ ರಘು ಆಚಾರ್, ದೊಡ್ಡಪ್ಪಗೌಡ ಪಾಟೀಲ, ಗುರುಲಿಂಗಪ್ಪಗೌಡ, ಗುರು ಪಾಟೀಲ ಸೇರಿದಂತೆ ನೂರಾರು ಕಾರ್ಯಕರ್ತರನ್ನು ಪಕ್ಷಕ್ಕೆ ಸ್ವಾಗತಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕೂಡ ಜೆಡಿಎಸ್ಗೆ ಸೇರ್ಪಡೆಯಾದರು.
ಉತ್ತರ ಕರ್ನಾಟಕ ಭಾಗದಲ್ಲಿಯೂ 25-30 ಸೀಟು ಗೆಲ್ಲಬಹುದು ಎಂದು ಈ ಹಿಂದೆ ಅಂದಾಜಿಸಲಾಗಿತ್ತು. ಆದರೆ ಈಗ ಅಲ್ಲಿ 40 ಸೀಟು ದಾಟಬಹುದು ಎಂದು ಹೇಳಿದ ಅವರು, ಶೀಘ್ರದಲ್ಲೇ ಬೇರೆ ಪಕ್ಷಗಳ ನಾಯಕರು ಜೆಡಿಎಸ್ ಸೇರಲಿದ್ದಾರೆ ಎಂದರು








