ಕುಮಾರಸ್ವಾಮಿ 2ಬಾರಿ ಸಿಎಂ ಆಗಿದ್ದಾರೆ ಅವರ ಸಾಧನೆ ಏನು…?

ರಾಮನಗರ:

     ಸಮ್ಮಿಶ್ರ ಸರ್ಕಾರದಲ್ಲಿ ಅಲ್ಪ ಮೊತ್ತದ ಸಂಖ್ಯೆ ಆದರೂ ಸಮೇತ ಮುಖ್ಯಮಂತ್ರಿ ಸ್ಥಾನಕ್ಕೆ ಅವರು ಬೇಡಿಕೆ ಇಟ್ಟಿದ್ದರು ಅದನ್ನು ಒಪ್ಪಿದ್ದೆವು . ಇದನ್ನು ನೀವು ಆಲೋಚಿಸಬೇಕು ಎಂದು ಜನತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌  ಹೇಳಿದ್ದಾರೆ.

      ರಾಮನಗರದಲ್ಲಿ ಪ್ರಜಾಧ್ವನಿ ಯಾತ್ರೆ ಕೈಗೊಂಡಿದ್ದ ಡಿ.ಕೆ.ಶಿವಕುಮಾರ್ ಶುಕ್ರವಾರ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ಮಾಡಿದರು. ಕ್ಷೇತ್ರದ ಹಲವೆಡೆ ಬಹಿರಂಗ ಸಭೆಗಳನ್ನ ನಡೆಸಿದರು. ಈ ವೇಳೆ ಬೃಹತ್ ಬೈಕ್‌ ರ‍್ಯಾಲಿ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದರು.

     ಈ ವೇಳೆ ಮಾತನಾಡಿದ ಡಿಕೆಶಿ, ಜೆಡಿಎಸ್ ಹಾಗೂ ಹೆಚ್‌ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೇ ನಾನೂ ಕೂಡಾ ಇದೇ ಜಿಲ್ಲೆಯ ಮಗ. ನನಗೂ ಒಂದು ಅವಕಾಶ ಕೊಡಿ ಎನ್ನುವ ಮೂಲಕ ಮೂಲಕ ಸಿಎಂ ಆಸೆಯನ್ನು ಮತ್ತೊಮ್ಮೆ ಬಿಚ್ಚಿಟ್ಟರು.

   
     ನಾನು ಕೂಡ ಇದೇ ಜಿಲ್ಲೆಯವನು, ಹೊರಗಿನಿಂದ ಬಂದಿಲ್ಲ. ನಾನು ಸತ್ತರೆ ದೊಡ್ಡಆಲಹಳ್ಳಿಗೆ ನನ್ನ ಹೆಣ ಹೋಗುತ್ತದೆ. ನಾವು ಎಲ್ಲರಿಗೂ ಸಹಾಯ ಮಾಡಿದ್ದೇವೆ. ಕುಮಾರಣ್ಣ ಅವರು ಸಿಎಂ ಆಗಲು ಬೆಂಬಲ ನೀಡಿದ್ದು ಕಾಂಗ್ರೆಸ್. ದೇವೇಗೌಡರನ್ನು ಮಾಜಿ ಪ್ರಧಾನಿ ಎಂದು ಕರೆಯುವಂತೆ ಮಾಡಲು ಕಾಂಗ್ರೆಸ್ ತ್ಯಾಗ ಮಾಡಿದೆ. ಇದನ್ನು ನೀವು ಆಲೋಚಿಸಬೇಕು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap