ಸಿ ಟಿ ರವಿ ದೆಹಲಿ ಪ್ರವಾಸದ ಮರ್ಮವೇನು ….?

ಬೆಂಗಳೂರು:

    ದೆಹಲಿಗೆ ಭೇಟಿ ಕುರಿತು ಪ್ರತಿಕ್ರಿಯೆ ನೀಡಿರುವ ಸಿ.ಟಿ.ರವಿ ಅವರು, ನಾನು ಯಾವುದೇ ಹುದ್ದೆಯನ್ನು ಬಯಸಿಲ್ಲ. 1991ರಲ್ಲಿ ಚಿಕ್ಕಮಗಳೂರು ಯುವ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಬಯಸಿದ್ದೆ. ಆದರೆ ಜಿಲ್ಲಾಧ್ಯಕ್ಷನಾದೆ. 1994ರಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ಟಿಕೆಟ್ ಕೇಳಿದ್ದೆ. ಆ ಎರಡು ಸಂದರ್ಭಗಳನ್ನು ಹೊರತುಪಡಿಸಿದರೆ, ನಂತರ ನಾನು ಯಾವುದೇ ಹುದ್ದೆಯನ್ನು ಬಯಸಲಿಲ್ಲ ಎಂದು ಹೇಳಿದರು.

     ನನಗೆ ಸಹಕಾರ ನೀಡಿದ ಪಕ್ಷದ ಪದಾಧಿಕಾರಿಗಳಿಗೆ ಧನ್ಯವಾದ ಹೇಳಲು ದೆಹಲಿಗೆ ಭೇಟಿ ನೀಡಿದ್ದೇನೆಂದು ತಿಳಿಸಿದರು.

ಈ ನಡುವೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ನೀಡಲಾಗಿದ್ದ ನಿವಾಸವನ್ನು ರವಿಯವರು ಖಾಲಿ ಮಾಡುತ್ತಿದ್ದಾರೆಂದು ತಿಳಿದುಬಂದಿದೆ.

    ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೈಬಿಟ್ಟಾಗ ರವಿ ಅವರು, ತಮಿಳುನಾಡಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆಯಲ್ಲಿದ್ದರು ಎಂಬುದು ಗಮನಾರ್ಹ ವಿಚಾರವಾಗಿದೆ. ಈ ಬೆಳವಣಿಗೆ ನಡುವಲ್ಲೇ ರವಿಯವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬರತೊಡಗಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap