ಮುಂಬಯಿ:
ಮಹಾರಾಷ್ಟ್ರ ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಎನ್ ಸಿ ಪಿ ಶಾಸಕರು ಕಣ್ಣಾಮುಚ್ಚಾಲೆ ಆಡುತ್ತಿದ್ದಾರೆ, ಈ ಶಾಸಕರು ಶರದ್ ಪವಾರ್ ಅಥವಾ ಅಜಿತ್ ಪವಾರ್ ಇಬ್ಬರಲ್ಲಿ ಯಾರನ್ನು ಬೆಂಬಲಿಸುತ್ತಾರೆ ಎಂಬುದು ಅಳತೆಗೆ ಸಿಗದ ವಿಷಯವಾಗಿದೆ.
ಎನ್ ಸಿಪಿ ವಿಭಜನೆಯ ನಂತರ, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ಇಬ್ಬರೂ ತಮ್ಮದೇ ಬಣ ನಿಜವಾದ ಎನ್ಸಿಪಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಜೊತೆಗೆ ಪ್ರತಿ ಬಣವೂ ಮನ್ನಣೆಗಾಗಿ ಪೈಪೋಟಿ ನಡೆಸುತ್ತಿರುವುದೆ, ಹೀಗಾಗಿ ಈ ವಿಷಯ ಭಾರತದ ಚುನಾವಣಾ ಆಯೋಗದ ಮೆಟ್ಟಿಲೇರಿದೆ.
ಶಾಸಕರು ಅಜಿತ್ ಪವಾರ್ ಅಥವಾ ಶರದ್ ಪವಾರ್ ಇಬ್ಬರನ್ನು ನೋಡಲು ಬಯಸುವುದಿಲ್ಲ. ಆದ್ದರಿಂದ, ಯಾರಿಗೆ ಹೆಚ್ಚು ಶಾಸಕರ ಬೆಂಬಲವಿದೆ ಎಂಬುದನ್ನು ತಿಳಿಯಲು ಕಷ್ಟವಾಗುತ್ತಿದೆ ಎಂದು ಹೆಸರು ಬಹಿರಂಗ ಪಡಿಸಲು ಇಚ್ಚಿಸದ ಎನ್ ಸಿಪಿ ಶಾಸಕರೊಬ್ಬರು ತಿಳಿಸಿದ್ದಾರೆ.
ಅಜಿತ್ ಪವಾರ್ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ನೇಮಕ ಮಾಡುವವರೆಗೂ ಗೊಂದಲ ಮುಂದುವರಿಯುತ್ತದೆ ಎಂದು ಅಜಿತ್ ಬಣದ ಶಾಸಕರೊಬ್ಬರು ತಿಳಿಸಿದ್ದಾರೆ. ನಮಗೆ 45 ಎನ್ಸಿಪಿ ಶಾಸಕರ ಬೆಂಬಲ ಸಿಕ್ಕಿದೆ ಆದರೆ ಅವರು ಅಜಿತ್ ದಾದಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದಾಗ ಮಾತ್ರ ಬಹಿರಂಗವಾಗಿ ಹೊರಬರುತ್ತಾರೆ, ಇಲ್ಲದಿದ್ದರೆ ಅವರು ತಟಸ್ಥರಾಗಿರುವುದಾಗಿ ಹೇಳಿದ್ದಾರೆಂದು ತಿಳಿಸಿದ್ದಾರೆ.
ಅಜಿತ್ ಪವಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಪಕ್ಷಕ್ಕೆ ಶಕ್ತಿ ತುಂಬುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಉತ್ತಮ ಹಣ ಸಿಗಲಿದೆ. ಅಲ್ಲಿಯವರೆಗೆ ತಟಸ್ಥವಾಗಿರುವುದು ಅವರಿಗೆ ಪ್ರಯೋಜನಕಾರಿಯಾಗಿದೆ ಎಂದು ಅವರು ವಿವರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/07/ajith-pawar.jpg)