ಮಂಡ್ಯ
ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಪಕ್ಷಾಂತರ ಪರ್ವ ಜೋರಾಗುತ್ತಿದೆ. ಮೈತ್ರಿ ಸರ್ಕಾರದ ಪತನಾ ನಂತರ ಬಿಜೆಪಿ ಸೇರ್ಪಡೆಯಾಗಿ ಇದೀಗ ಹಾಲಿ ಸಚಿವರಾಗಿರುವ ನಾರಾಯಣ ಗೌಡ ಅವರು ಬಿಜೆಪಿ ತೊರೆಯುವ ಮನಸ್ಸು ಮಾಡಿದ್ದಾರೆ ಎನ್ನುವ ವ್ಯಾಕ್ಯಾನಗಳು ಹರಿದಾಡುತ್ತಿವೆ.
ಈಗಾಗಲೇ ಮಂಡ್ಯ ಜಿಲ್ಲೆಯಿಂದ ರಾಜಕೀಯ ಅಖಾಡಕ್ಕೆ ಧುಮುಕಿದ್ದ ಬಿಜೆಪಿ ನಾಯಕರು ಈ ಹಿಂದೆ ಅಮಿತ್ ಶಾ ಮೂಲಕ ಮಂಡ್ಯದಲ್ಲಿ ರಾಜಕೀಯ ಸಮಾವೇಶ ನಡೆಸುವ ಮೂಲಕ ಚುನಾವಣ ಪ್ರಚಾರವನ್ನ ನಡೆಸಿದ್ರು. ಇನ್ನೂ ಮಾರ್ಚ್ 12 ರಂದು ಮಂಡ್ಯ ಜಿಲ್ಲೆಗೆ ಪ್ರಧಾನಿ ಮೋದಿ ಬರಲು ಈಗಾಗಲೇ ಬಿಜೆಪಿ ವೇದಿಕೆ ಸಜ್ಜುಗೊಳಿಸಿದೆ. ಆದರೆ, ಕಾಂಗ್ರೆಸ್ ಸೇರುವ ತವಕದಲ್ಲಿದ್ದು,ಮಾರ್ಚ್ 12 ರಂದು ಮಂಡ್ಯಕ್ಕೆ ಮೋದಿ ಬಂದು ಹೋದ ಬಳಿಕ ಪಕ್ಷಾಂತರ ವೇದಿಕೆ ರೆಡಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸಚಿವ ನಾರಾಯಣ ಗೌಡ ಕಾಂಗ್ರೆಸ್ ಸೇರ್ತಾರೆ ಎನ್ನುವ ಚರ್ಚೆ ಇದೀಗ ಸಾಕಷ್ಟು ಸುದ್ದಿಯಾಗಿದ್ದು, ಬಿಜೆಪಿ ಪಕ್ಷದಿಂದ ಈಗಾಗಲೇ ಸಾಕಷ್ಟು ಅಂತರವನ್ನ ಕಾಯ್ದುಕೊಂಡಿದ್ದು, ಮಂಡ್ಯದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದ ಯಾವುದೇ ಪೂರ್ವಭಾವಿ ಸಭೆಗಳಲ್ಲೂ ಭಾಗವಹಿಸುತ್ತಿಲ್ಲ.
![](https://prajapragathi.com/wp-content/uploads/2023/03/Untitled-3-16.jpg)