ಯತ್ನಾಳ್ ಹೊರಗಿನವರಲ್ಲ, ನಮ್ಮವರೇ : ಬಿ ಎಸ್‌ ಯಡಿಯೂರಪ್ಪ

ಶಿವಮೊಗ್ಗ:

    ಯತ್ನಾಳ್ ಹೊರಗಿನವರಲ್ಲ, ನಮ್ಮವರೇ. ಯಾವುದೋ ಕಾರಣಕ್ಕೆ ಅವರು ಹಾಗೆ ಮಾತನಾಡುತ್ತಿದ್ದಾರೆ. ಎಲ್ಲವನ್ನೂ ಹೈ ಕಮಾಂಡ್ ಕೂತು ಬಗೆಹರಿಸುತ್ತದೆ ಎಂಬ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   ತಿಳಿಸಿದ್ದಾರೆ.

    ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರುವ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ನಮ್ಮ ಶಾಸಕರು ಜಾಗೃತಿ ಮೂಡಿಸಲಿದ್ದಾರೆ. ಮುಡಾ ಹಗರಣದ ಬಗ್ಗೆ ಮಾಧ್ಯಮಗಳಲ್ಲಿ ಎಲ್ಲ ವಿವರಗಳು ಹೊರಗೆ ಬರುತ್ತಿವೆ. ನಿವೇಶನ ವಾಪಾಸ್ ನೀಡಿದ್ದರೂ ಅಪರಾಧ ಅಪರಾಧವೇ ಆಗಿದೆ. ಮುಡಾದಲ್ಲಿ ಸಾವಿರಾರು ನಿವೇಶನಗಳನ್ನು ಅಕ್ರಮವಾಗಿ ನೀಡಲಾಗಿದೆ ಎಂಬ ಆರೋಪವಿದೆ. ಇ.ಡಿ. ರಂಗಕ್ಕೆ ಇಳಿಯಬೇಕಾದರೆ ಸೂಕ್ತ ಸಾಕ್ಷ್ಯವಿಲ್ಲದೇ ಅವರು ಬರುವುದಿಲ್ಲ. ಸಾಕಷ್ಟು ಪುರಾವೆ ಸಿಕ್ಕಿದ್ದರಿಂದಲೇ ಇ.ಡಿ. ಪ್ರವೇಶ ಮಾಡಿದೆ ಎಂದರು.

   ಬಸನಗೌಡ ಪಾಟೀಲ್‌ ಯತ್ನಾಳ್ ಬಂಡಾಯ ಪಕ್ಷಕ್ಕೆ ಹಾನಿಯಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲರೂ ಒಟ್ಟಾಗಿ ಪಕ್ಷವನ್ನು ಮುಂದೆ ತೆಗೆದುಕೊಂಡು ಹೋಗುತ್ತೇವೆ. ಏನೇ ಭಿನ್ನಾಭಿಪ್ರಾಯವಿದ್ದರೂ ಎದುರುಬದುರು ಕೂತು ಚರ್ಚಿಸಿ, ಒಟ್ಟಾಗಿ ಹೋಗುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Recent Articles

spot_img

Related Stories

Share via
Copy link