ಬರ ಪರಿಸ್ಥಿತಿಯ ನಿಖರವಾದ ವಿವರ ಪಡೆಯಿರಿ : ಈಶ್ವರಪ್ಪ

ಬೆಂಗಳೂರು

   ಕರ್ನಾಟಕದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ನಿಖರವಾದ ವಿವರವನ್ನು ಒಂದು ತಿಂಗಳಲ್ಲಿ ಸರ್ಕಾರ ಸಂಗ್ರಹಿಸಬೇಕು. ನಂತರವಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸರ್ವಪಕ್ಷ ನಿಯೋಗವನ್ನು ಕರೆದೊಯ್ಯೋಣ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಸಲಹೆ ನೀಡಿದ್ದಾರೆ.

    ಬುಧವಾರ ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆ ಕೊರತೆಯಿಂದ ಆಗಿರುವ ಬೆಳೆ ನಷ್ಟದ ಪ್ರಮಾಣವನ್ನು ತಿಳಿದುಕೊಳ್ಳಬೇಕು. ಎಷ್ಟು ರೈತರು ತಮ್ಮ ಬದುಕನ್ನು ಕೊನೆಗೊಳಿಸಿದ್ದಾರೆ ಎಂಬುದನ್ನೂ ನಾವು ತಿಳಿದುಕೊಳ್ಳಬೇಕು. ಎಲ್ಲಾ ವಿವರಗಳೊಂದಿಗೆ ನಾವು ಮೋದಿ ಅವರನ್ನು ಭೇಟಿ ಮಾಡಿ, ಬರ ಪರಿಸ್ಥಿತಿಯನ್ನು ವಿವರಿಸಬೇಕು ಎಂದರು.

    ಈ ನಿಟ್ಟಿನಲ್ಲಿ ನಾವು ಸರ್ಕಾರದ ಪರವಾಗಿ ನಿಲ್ಲುತ್ತೇವೆ. ಆದರೆ, ಸರ್ಕಾರ ಅದನ್ನು ಮಾಡದೆ ಕೇಂದ್ರದ ಮೇಲೆ ಆರೋಪ ಮಾಡುತ್ತಿದೆ. ರಾಜ್ಯದ ರೈತರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

   ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ವರುಣಾ ಕ್ಷೇತ್ರದಲ್ಲಿ ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್ ಹಂಚಿರುವುದನ್ನು ಯತೀಂದ್ರ ಒಪ್ಪಿಕೊಂಡಿದ್ದಾರೆ. ಚುನಾವಣಾ ಆಯೋಗ ಮಧ್ಯ ಪ್ರವೇಶಿಸಿ ಸಿದ್ದರಾಮಯ್ಯ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಈಶ್ವರಪ್ಪ ಒತ್ತಾಯಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap